ರಾಜ್ಯದ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯ ನಂತರ ಅವರು, ಬೆಂಗಳೂರು ಗ್ರಾಮಾಂತರ , ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಮಾವಿನ ದರ ಕುಸಿದಿರುವುದು ಹಾಗೂ ಆಂಧ್ರಕ್ಕೆ ಪೂರೈಕೆ ಮಾಡಲು ನಿರ್ಬಂಧ ಹೇರಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಮಾವು ಬೆಳೆಗಾರರಿಗೆ ಕೇಂದ್ರದಿಂದ ಹೆಚ್ಚಿನ ನೆರವನ್ನು ಪಡೆಯುವ ಜವಾಬ್ದಾರಿಯನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂಪಾಯಿ ವರೆಗೆ ನಗದುರಹಿತ ಆರೋಗ್ಯ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಪ್ರಾಥಮಿಕ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು 18 ಕೋಟಿ 97 ಲಕ್ಷ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…