ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ

April 4, 2025
7:22 AM

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಮನವಿ ಮಾಡಿದರು. ವಿಷಯ ಪ್ರಸ್ತಾಪಿಸಿದ ಅವರು, ಅರಣ್ಯ ಸಂರಕ್ಷಿಸುವ ಹೆಸರಿನಲ್ಲಿ ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳು , ಅರಣ್ಯ, ಜಮೀನನ್ನು ಇತರ ಉದ್ದೇಶಗಳಿಗೆ ನೀಡಿ ಲಾಭ ಮಾಡಿಕೊಳ್ಳಲು ಹೊರಟಿವೆ. ಹೈದರಾಬಾದ್ ನಲ್ಲಿ 400 ಎಕರೆ ಅರಣ್ಯ ಜಮೀನನ್ನು ರಾತ್ರೋರಾತ್ರಿ ನೆಲಸಮ ಮಾಡಿ , ರಿಯಲ್‌ ಎಸ್ಟೇಟ್‌ ಮಾಫಿಯಾಗೆ ಅನುಕೂಲ ಮಾಡಿಕೊಡಲು , ಈ ಪ್ರದೇಶದಲ್ಲಿ ಐಟಿ ಪಾರ್ಕ್‌‌ಗೆ ಅನುಮತಿ ನೀಡಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಪರಿಸರ ಹಾಳುಮಾಡುವ ಪ್ರಯತ್ನ ನಡೆದಿದೆ. ಸದ್ಯ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿ ನೀಡಲು ಉದ್ದೇಶಿಸಲಾಗಿದೆ. ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror