Advertisement
ಮಾಹಿತಿ

ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

Share

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ.ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.

ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ.

ಆಸಕ್ತರು  ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ https://www.india.gov.in  ಗೆ ಹೋಗಿ.
ಅಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇರುತ್ತದೆ.. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತದೆ.

ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ:

  • 20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು
  • ಕಾರ್ಮಿಕರು, ಕುಟುಂಬದ ಆದಾಯ 12 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು.
  • ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಈ ಯೋಜನೆಗೆ ಅರ್ಹರು.
  • ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಈ ಯೋಜನೆಗೆ ಅರ್ಹರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

10 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

14 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

22 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

22 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

23 hours ago