ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ ಪ್ರತಿಗಳನ್ನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 7 ರ ವರೆಗೆ ಅವಕಾಶವಿದೆ. ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯ ಇಲ್ಲದವರು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ ಲೋಡ್ ಮಾಡಿ ಶುಲ್ಕ ಪಾವತಿಸಲು ಇದೇ 8 ರ ವರೆಗೆ ಕಾಲವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇದೇ 4 ರಿಂದ 11 ರವರೆಗೆ ಅವಕಾಶ ಇದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಎಸ್.ಎಸ್.ಎಲ್.ಸಿ. 2025 ರ ಪರೀಕ್ಷೆ -2 ಅನ್ನು ಇದೇ 26 ರಿಂದ ಜೂನ್ 2 ವರೆಗೆ ಹಾಗೂ ಪರೀಕ್ಷೆ 3 ಜೂನ್ 23 ರಿಂದ 30 ರವರೆಗೆ ನಡೆಸಲಾಗುವುದು. ಪರೀಕ್ಷೆ -2 ಕ್ಕೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ನಾಳೆಯಿಂದ ಇದೇ ಹತ್ತರ ವರೆಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.
ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…
ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…
ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…