ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ ಪ್ರತಿಗಳನ್ನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 7 ರ ವರೆಗೆ ಅವಕಾಶವಿದೆ. ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯ ಇಲ್ಲದವರು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ ಲೋಡ್ ಮಾಡಿ ಶುಲ್ಕ ಪಾವತಿಸಲು ಇದೇ 8 ರ ವರೆಗೆ ಕಾಲವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇದೇ 4 ರಿಂದ 11 ರವರೆಗೆ ಅವಕಾಶ ಇದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಎಸ್.ಎಸ್.ಎಲ್.ಸಿ. 2025 ರ ಪರೀಕ್ಷೆ -2 ಅನ್ನು ಇದೇ 26 ರಿಂದ ಜೂನ್ 2 ವರೆಗೆ ಹಾಗೂ ಪರೀಕ್ಷೆ 3 ಜೂನ್ 23 ರಿಂದ 30 ರವರೆಗೆ ನಡೆಸಲಾಗುವುದು. ಪರೀಕ್ಷೆ -2 ಕ್ಕೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ನಾಳೆಯಿಂದ ಇದೇ ಹತ್ತರ ವರೆಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…