Advertisement
MIRROR FOCUS

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ

Share

ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ ಪ್ರತಿಗಳನ್ನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 7 ರ ವರೆಗೆ ಅವಕಾಶವಿದೆ. ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯ ಇಲ್ಲದವರು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ ಲೋಡ್ ಮಾಡಿ ಶುಲ್ಕ ಪಾವತಿಸಲು ಇದೇ 8 ರ ವರೆಗೆ ಕಾಲವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇದೇ 4 ರಿಂದ 11 ರವರೆಗೆ ಅವಕಾಶ ಇದೆ.  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಎಸ್.ಎಸ್.ಎಲ್.ಸಿ. 2025 ರ ಪರೀಕ್ಷೆ -2 ಅನ್ನು ಇದೇ 26  ರಿಂದ ಜೂನ್ 2 ವರೆಗೆ ಹಾಗೂ ಪರೀಕ್ಷೆ 3 ಜೂನ್ 23 ರಿಂದ 30 ರವರೆಗೆ ನಡೆಸಲಾಗುವುದು. ಪರೀಕ್ಷೆ -2  ಕ್ಕೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ನಾಳೆಯಿಂದ ಇದೇ ಹತ್ತರ ವರೆಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

18 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago