ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ ಪ್ರತಿಗಳನ್ನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 7 ರ ವರೆಗೆ ಅವಕಾಶವಿದೆ. ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯ ಇಲ್ಲದವರು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ ಲೋಡ್ ಮಾಡಿ ಶುಲ್ಕ ಪಾವತಿಸಲು ಇದೇ 8 ರ ವರೆಗೆ ಕಾಲವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇದೇ 4 ರಿಂದ 11 ರವರೆಗೆ ಅವಕಾಶ ಇದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಎಸ್.ಎಸ್.ಎಲ್.ಸಿ. 2025 ರ ಪರೀಕ್ಷೆ -2 ಅನ್ನು ಇದೇ 26 ರಿಂದ ಜೂನ್ 2 ವರೆಗೆ ಹಾಗೂ ಪರೀಕ್ಷೆ 3 ಜೂನ್ 23 ರಿಂದ 30 ರವರೆಗೆ ನಡೆಸಲಾಗುವುದು. ಪರೀಕ್ಷೆ -2 ಕ್ಕೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ನಾಳೆಯಿಂದ ಇದೇ ಹತ್ತರ ವರೆಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…