( ಸಾಂದರ್ಭಿಕ ಚಿತ್ರ )
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್ ವಿಸ್ತೀರ್ಣ ಮೀರದ ಬೆಳೆಗಾರರು ಷರತ್ತಿಗೊಳಪಟ್ಟು 2 ಹೆಕ್ಟೇರ್ ವರೆಗಿನ ಪ್ರದೇಶಕ್ಕೆ ನಾಟಿ ಅನುದಾನಕ್ಕೆ ಅರ್ಹರಾಗಿರುತ್ತಾರೆ. ಬೆಳೆಗಾರರು 2023ರ ನವೆಂಬರ್ 30ರಂದು ಅಥವಾ ಮೊದಲು ಕೇಂದ್ರ ಸರ್ಕಾರದ ಸೇವೆ ಮತ್ತು ಸರ್ವೀಸ್ ಪ್ಲಸ್ ವೆಬ್ ಪೊರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಬ್ಬರ್ ಮಂಡಳಿಯ ವೆಬ್ಸೈಟ್ ನೋಡಬಹುದು ಅಥವಾ ಬೆಳೆಗಾರರು ಮಂಗಳೂರು, ಪುತ್ತೂರು, ಕುಂದಾಪುರ ಮತ್ತು ಶಿವಮೊಗ್ಗದಲ್ಲಿರುವ ಹತ್ತಿರದ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಅಥವಾ ಕೇತ್ರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಉಪ ರಬ್ಬರ್ ಉತ್ಪಾದನಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…