ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ.
ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಸೋಮವಾರಪೇಟೆ ವೃತ್ತ, ವಿರಾಜಪೇಟೆ ವೃತ್ತರವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…