ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ.
ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಸೋಮವಾರಪೇಟೆ ವೃತ್ತ, ವಿರಾಜಪೇಟೆ ವೃತ್ತರವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…