Advertisement
ಸುದ್ದಿಗಳು

#Electricity | ಒಂದೇ ದಿನಕ್ಕೆ ಬೇರೆ ಬೇರೆ ವಿದ್ಯುತ್ ದರ ಅನ್ವಯ | ಕೇಂದ್ರದಿಂದ ಹೊಸ ಮಾದರಿ ಕರೆಂಟ್ ಬಿಲ್ ವ್ಯವಸ್ಥೆ

Share

ಬೇಸಿಗೆ ಕಾಲದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ,  ಕರೆಂಟ್ ಬಿಲ್ #ElectricityBill ದರ ಏರಿಕೆ ಆಗಾಗ..!, ರಾಜ್ಯದಲ್ಲಿ ಗೃಹಜ್ಯೋತಿ ಉಚಿತ ವಿದ್ಯುತ್ ವ್ಯವಸ್ಥೆ ಜಾರಿಗೆ ಬರುವುದಾಗಿ ಹೇಳಿದರು ಅದರಿಂದ ಯಾರಿಗೆ..? ಎಷ್ಟು..? ಪ್ರಯೋಜನ ಇದೆಯೋ ಇಲ್ಲವೋ..?. ಆದರೆ ವಿದ್ಯುತ್‍ ದರವಂತೂ ಏರಿಕೆ ಕಂಡಿದೆ. ಇದಕ್ಕೆಲ್ಲಾ ಕಡಿವಾಣ ಹಾಕಲು ಕೇಂದ್ರ ಸರ್ಕಾರ 2020ರ ವಿದ್ಯುತ್ ಗ್ರಾಹಕರ ಹಕ್ಕು ನಿಯಮಕ್ಕೆ ತಿದ್ದುಪಡಿ ತಂದಿದ್ದು ಅದಕ್ಕೆ ಅನುಮೋದನೆ ಕೂಡ ಸಿಕ್ಕಿದೆ. ವಿದ್ಯುತ್ ಬಳಕೆ ವಿಚಾರದಲ್ಲಿ ದಿನದ ಬೇರೆ ಬೇರೆ ಸಮಯಕ್ಕೆ ಬೇರೆ ಬೇರೆ ದರ ವಿಧಿಸುವಂತೆ ನಿಯಮ ಬದಲಾಯಿಸಲಾಗಿದೆ.

ವಿದ್ಯುತ್ ಲೋಡಿಂಗ್ ಸಮಸ್ಯೆ ನಿವಾರಿಸಲು ಕೇಂದ್ರ ಸರ್ಕಾರ ಹೊಸ ಉಪಾಯ ಹುಡುಕಿದೆ. ಅದರಂತೆ ದಿನದಲ್ಲಿ ಬೇರೆ ಬೇರೆ ಸಮಯದಲ್ಲಿ ವಿದ್ಯುತ್ ಬಳಕೆಗೆ ಬೇರೆ ಬೇರೆ ದರ ಅನ್ವಯ ಮಾಡುವಂತ ವ್ಯವಸ್ಥೆಯನ್ನು ಕೇಂದ್ರ ಜಾರಿ ಮಾಡುತ್ತಿದೆ. ಇದರಲ್ಲಿ ನೀವು ಬೆಳಗಿನ ನಿರ್ದಿಷ್ಟ ಅವಧಿಯಲ್ಲಿ ಬಳಸುವ ವಿದ್ಯುತ್​ಗೆ ಬೇರೆ ದರ ಇರುತ್ತದೆ. ಬೆಳಗ್ಗೆ ಅಥವಾ ಸಂಜೆ ಬಳಸುವ ವಿದ್ಯುತ್​ಗೆ ಬೇರೆ ದರ ಇರುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜೂನ್ 23, ಶುಕ್ರವಾರದಂದು ವಿದ್ಯುತ್ ಗ್ರಾಹಕರ ಹಕ್ಕು ನಿಯಮ 2020ಕ್ಕೆ ತಿದ್ದುಪಡಿಗೆ ಅನುಮೋದಿಸಿದೆ. ಇದರಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯೂ ಒಳಗೊಂಡಿದೆ.

ಸೋಲಾರ್ ಅವರ್ ಅಥವಾ ಸೌರ ಗಂಟೆ ಎಂದು ಕರೆಯಲಾಗುವ ಅವಧಿಯಲ್ಲಿ ವಿದ್ಯುತ್ ದರ ಶೇ. 10ರಿಂದ 20ರಷ್ಟು ಕಡಿಮೆ ಇರುತ್ತದೆ. ಪೀಕ್ ಅವರ್ ಅಥವಾ ಉಚ್ಛ್ರಾಯ ಅವಧಿಯಲ್ಲಿ ಶೇ. 10ರಿಂದ ಶೇ. 20ರಷ್ಟು ಹೆಚ್ಚು ದರ ಇರಲಿದೆ. ಈ ಅವಧಿಯನ್ನು ರಾಜ್ಯ ವಿದ್ಯುತ್ ಪ್ರಾಧಿಕಾರಗಳು ನಿರ್ಧರಿಸುತ್ತವೆ.

ಹೊಸ ಮಾದರಿಯ ವಿದ್ಯುತ್ ದರ ವ್ಯವಸ್ಥೆಯು ಎಲ್ಲೆಡೆ ಸ್ಮಾರ್ಟ್​ಮೀಟರ್ ಅಳವಡಿಕೆ ಪೂರ್ಣಗೊಂಡ ಬಳಿಕ ಅನ್ವಯ ಆಗಬಹುದು. ಸರ್ಕಾರ 2024 ಏಪ್ರಿಲ್ 1ರಿಂದ ಈ ವ್ಯವಸ್ಥೆಯನ್ನು ಜಾರಿಗೊಳಿಸುವ ಗುರಿ ಹೊಂದಿದೆ. ಮೊದಲಿಗೆ 10 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯುತ್ ಬೇಡಿಕೆ ಇರುವ ವಾಣಿಜ್ಯ ಮತ್ತು ಔದ್ಯಮಿಕ ಗ್ರಾಹಕರಿಗೆ ಇದು ಅನ್ವಯ ಆಗಲಿದೆ. ಒಂದು ವರ್ಷದ ಬಳಿಕ, 2025 ಏಪ್ರಿಲ್ 1ರಿಂದ ಕೃಷಿ ಗ್ರಾಹಕರನ್ನು ಹೊರತುಪಡಿಸಿ ಉಳಿದೆಲ್ಲಾ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಇದು ಜಾರಿಯಾಗುವ ನಿರೀಕ್ಷೆ ಇದೆ.

ಸೌರ ಗಂಟೆಯಲ್ಲಿ ಯಾಕೆ ವಿದ್ಯುತ್ ದರ ಕಡಿಮೆ? : ಪೀಕ್ ಅವಧಿ, ಸೌರ ಅವಧಿ ಮತ್ತು ಸಹಜ ಅವಧಿ ಹೀಗೆ ವಿದ್ಯುತ್ ದರಗಳನ್ನು ವಿಭಾಗಿಸುವುದರಿಂದ ಗ್ರಾಹಕರು ವಿದ್ಯುತ್ ಬಳಕೆಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ನಿಭಾಯಿಸಬಹುದು. ಇದರಿಂದ ಗ್ರಾಹಕರಿಗೂ ಲಾಭ, ವಿದ್ಯುತ್ ಸರಬರಾಜು ವ್ಯವಸ್ಥೆಗೂ ಹೊರೆ ತಗ್ಗುತ್ತದೆ ಎಂಬುದು ಸರ್ಕಾರದ ಎಣಿಕೆ.

ಸೌರ ಗಂಟೆಗಳೆಂದರೆ ಅದು ಸೂರ್ಯನ ಬಿಸಿಲು ಇರುವ ಕಾಲಾವಧಿ. ಈ ಸಂದರ್ಭದಲ್ಲಿ ಸೌರ ವಿದ್ಯುತ್ ಉತ್ಪಾದನೆ ಹೆಚ್ಚಿರುತ್ತದೆ. ಇದರ ಬೆಲೆ ಕಡಿಮೆ ಇರುವುದರಿಂದ ವಿದ್ಯುತ್ ಬಳಕೆದಾರರಿಗೆ ಈ ಅವಧಿಯಲ್ಲಿನ ಬಳಕೆಗೆ ದರ ಕಡಿಮೆಗೊಳಿಸಲು ಉದ್ದೇಶಿಸಲಾಗಿದೆ. ಇನ್ನು ದಿನದ ಬೇರೆ ಕಾಲಾವಧಿಯಲ್ಲಿ ಜಲವಿದ್ಯುತ್ ಇತ್ಯಾದಿ ಮೂಲದಿಂದ ತಯಾರಾಗುವ ವಿದ್ಯುತ್ ಅನ್ನು ಬಳಸಲಾಗುತ್ತದೆ. ಇವು ಹೆಚ್ಚಿನ ಬೆಲೆ ಹೊಂದಿರುವುದರಿಂದ ಇದರ ಬಳಕೆಗೂ ಹೆಚ್ಚಿನ ದರ ಅನ್ವಯ ಮಾಡುವುದು ಸರ್ಕಾರದ ತಂತ್ರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 days ago