ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

July 8, 2025
7:36 PM

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2025-26) ಸಹ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು  ಕೆ-ಕಿಸಾನ್   ಪೋರ್ಟಲ್‍ ನ Citizen Login  ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ ನಾಗರೀಕ ಸೇವಾ ಕೇಂದ್ರ/ ಸ್ವತಃ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID( Fruits Identification) ಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ  ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ನಿಬಂಧನೆಗಳು: ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.  ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದು ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ.  ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸಬೇಕು.

ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ರೂ.15000, ದ್ವಿತೀಯ ಬಹುಮಾನ ರೂ.10000,  ತೃತೀಯ ಬಹುಮಾನ ರೂ.5000 ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ರೂ.30000, ದ್ವಿತೀಯ ಬಹುಮಾನ ರೂ.25000, ತೃತೀಯ ಬಹುಮಾನ ರೂ.20000 ನೀಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ  ರೂ.50000, ದ್ವಿತೀಯ ಬಹುಮಾನ ರೂ.40000, ತೃತೀಯ ಬಹುಮಾನ    ರೂ.35000 ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror