Advertisement
MIRROR FOCUS

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

Share

ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ, ಬಿತ್ತನೆ ಬೀಜ ಇತ್ಯಾದಿ ಗಂಭೀರ ಚಿಂತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಬೇಕು ಎಂದು ಕೇಂದ್ರ ಸಚಿವ  ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಹಾವೇರಿ-ಧಾರವಾಡ ಭಾಗದ ಭೇಟಿ ವೇಳೆ ಮಾತನಾಡಿದ ಅವರು, ಮಳೆ ಕೊರತೆ ಮುಂದುವರಿದರೆ ಕುಡಿಯುವ ನೀರು ಮತ್ತು ಜಾನುವಾರು ಮೇವು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಪ್ರಸ್ತುತ ರಾಜ್ಯದಲ್ಲಿ ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರಿಲ್ಲದಿರುವುದು ರೈತರ ಸಮಸ್ಯೆಗಳ ನಿರ್ವಹಣೆಯಲ್ಲಿ ಹಿನ್ನಡೆಯಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮುಂಚಿತ ಪರಿಹಾರ ಕ್ರಮಗಳ ಸಿದ್ಧತೆ ಕುರಿತು ಸೂಚನೆ ನೀಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದೇಶದ ಆಹಾರ ಧಾನ್ಯಗಳ ಸಂಗ್ರಹ ಸಮರ್ಪಕವಾಗಿದ್ದರೂ, ಮಳೆ ಕೊರತೆ ಮುಂದುವರಿದರೆ ಗ್ರಾಮೀಣ ಪ್ರದೇಶಗಳಲ್ಲಿ ನೀರು ಮತ್ತು ಮೇವು ನಿರ್ವಹಣೆ ದೊಡ್ಡ ಸವಾಲಾಗಬಹುದು ಎಂದು ಅವರು ಹೇಳಿದ್ದಾರೆ. ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಚಿವ ಸಂಪುಟದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಜೋಶಿ ಒತ್ತಿ ಹೇಳಿದ್ದಾರೆ.

Rural Mirror Insight | ರೂರಲ್ ಮಿರರ್ ಇನ್‌ಸೈಟ್:

ಪ್ರಸ್ತುತ ದೇಶದಲ್ಲಿ ಮಳೆ ಕೊರತೆ ಸುಮಾರು 40%ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿಯೂ ಹಲವೆಡೆ ಮಳೆಯ ಪ್ರಮಾಣ ನಿರೀಕ್ಷಿತ ಮಟ್ಟ ತಲುಪಿಲ್ಲ. ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆಯ ನಿರ್ಧಾರಗಳು ಅತ್ಯಂತ ಮಹತ್ವ ಪಡೆದುಕೊಳ್ಳುತ್ತವೆ. ಹೀಗಾಗಿ ಕೃಷಿ ಇಲಾಖೆ ಸರಿಯಾಗಿ ಕೆಲಸ ಮಾಡಬೇಕು, ಇದಕ್ಕಾಗಿ ಸೂಕ್ತ ಕೃಷಿ ಸಚಿವರ ಅಗತ್ಯ ಇದೆ.  ಪ್ರಾಕೃತಿಕ ವಿಕೋಪ, ಮಳೆ ಕೊರತೆ ಅಥವಾ ಬೆಳೆ ರೋಗದ ಸಂದರ್ಭಗಳಲ್ಲಿ ರೈತರಿಗೆ ಸರ್ಕಾರದೊಂದಿಗೆ ನೇರ ಸಂವಹನ ನಡೆಸುವ ಇಲಾಖೆಯ ಮುಖ್ಯಸ್ಥರ ಅಗತ್ಯವಿರುತ್ತದೆ. ಪೂರ್ಣಾವಧಿ ಸಚಿವರ ನೇಮಕಾತಿಯಿಂದ ನೀತಿ ನಿರ್ಧಾರಗಳ ವೇಗ ಹೆಚ್ಚಾಗಬಹುದು ಎಂಬ ಅಭಿಪ್ರಾಯ ಕೃಷಿ ವಲಯದಲ್ಲಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಡಿಕೆ, ಕಾಫಿ, ಕರಿಮೆಣಸು, ರಬ್ಬರ್ ಮತ್ತು ತೆಂಗು ಬೆಳೆಗಾರರು ಈಗಾಗಲೇ ಹವಾಮಾನ ವೈಪರೀತ್ಯದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯದ ವಿವಿದೆಡೆ ಬೆಳೆಗಳ ರೋಗ ನಿರ್ವಹಣೆ, ಬೆಳೆ ಸಲಹೆ, ಪರಿಹಾರ ಯೋಜನೆಗಳು ಹಾಗೂ ವಿಮೆ ವಿಚಾರಗಳಲ್ಲಿ ಕೃಷಿ ಇಲಾಖೆಯ ಸಕ್ರಿಯತೆ ಅಗತ್ಯವಾಗಿದೆ.

ಹೀಗಾಗಿ ಈ ವಿಷಯವನ್ನು ರಾಜಕೀಯ ವಾದ-ಪ್ರತಿವಾದದ ದೃಷ್ಟಿಯಿಂದ ನೋಡುವುದಕ್ಕಿಂತ, ಮುಂಗಾರು ಹಂಗಾಮಿನಲ್ಲಿ ರೈತರ ಹಿತದೃಷ್ಟಿಯಿಂದ ನೋಡುವುದು ಮುಖ್ಯ. ಕೃಷಿ ಕ್ಷೇತ್ರವು ರಾಜ್ಯದ ಆರ್ಥಿಕತೆಯ ಪ್ರಮುಖ ಆಧಾರವಾಗಿರುವುದರಿಂದ ಇಲಾಖೆಯ ನಾಯಕತ್ವದ ಪ್ರಶ್ನೆ ಮಹತ್ವ ಪಡೆಯುತ್ತದೆ.

Union Minister Pralhad Joshi has urged the Karnataka government to immediately appoint a full-time Agriculture Minister, citing concerns over deficient monsoon rainfall and the need for better preparedness to handle potential water and fodder shortages. He stressed that effective agricultural administration is crucial during the ongoing weather uncertainty.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

1 hour ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

2 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

8 hours ago

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ

ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…

17 hours ago

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ

ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…

17 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…

19 hours ago