ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ತಲಾ ಇಬ್ಬರಂತೆ ಸ್ತ್ರೀರೋಗ, ಅರಿವಳಿಕೆ ಹಾಗೂ ಮಕ್ಕಳ ತಜ್ಞರನ್ನು ಕಡ್ಡಾಯಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಒತ್ತಡ ಇಲ್ಲದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ತಜ್ಞರನ್ನು ತಾಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುವ ಮೂಲಕ ತಾಲೂಕು ಆಸ್ಪತ್ರೆಗಳನ್ನು ಬಲಪಡಿಸಲಾಗುವುದು. ಅರಿವಳಿಕೆ ಹಾಗೂ ಸ್ತ್ರೀರೋಗ ತಜ್ಞರು ತಲಾ ಇಬ್ಬರು ಇದ್ದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಾಧ್ಯವಾಗಲಿದೆ ಎಂದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನವಾಗಿ ಸಿದ್ಧಗೊಂಡಿರುವ ಕ್ಯಾಥ್ಲ್ಯಾಬ್ ಶೀಘ್ರವಾಗಿ ಕಾರ್ಯಾರಂಭಿಸಲಿದೆ. ಇಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಆಂಜಿಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…