ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ತಲಾ ಇಬ್ಬರಂತೆ ಸ್ತ್ರೀರೋಗ, ಅರಿವಳಿಕೆ ಹಾಗೂ ಮಕ್ಕಳ ತಜ್ಞರನ್ನು ಕಡ್ಡಾಯಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಒತ್ತಡ ಇಲ್ಲದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ತಜ್ಞರನ್ನು ತಾಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುವ ಮೂಲಕ ತಾಲೂಕು ಆಸ್ಪತ್ರೆಗಳನ್ನು ಬಲಪಡಿಸಲಾಗುವುದು. ಅರಿವಳಿಕೆ ಹಾಗೂ ಸ್ತ್ರೀರೋಗ ತಜ್ಞರು ತಲಾ ಇಬ್ಬರು ಇದ್ದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಾಧ್ಯವಾಗಲಿದೆ ಎಂದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನವಾಗಿ ಸಿದ್ಧಗೊಂಡಿರುವ ಕ್ಯಾಥ್ಲ್ಯಾಬ್ ಶೀಘ್ರವಾಗಿ ಕಾರ್ಯಾರಂಭಿಸಲಿದೆ. ಇಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಆಂಜಿಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…