ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ತಲಾ ಇಬ್ಬರಂತೆ ಸ್ತ್ರೀರೋಗ, ಅರಿವಳಿಕೆ ಹಾಗೂ ಮಕ್ಕಳ ತಜ್ಞರನ್ನು ಕಡ್ಡಾಯಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಒತ್ತಡ ಇಲ್ಲದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ತಜ್ಞರನ್ನು ತಾಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುವ ಮೂಲಕ ತಾಲೂಕು ಆಸ್ಪತ್ರೆಗಳನ್ನು ಬಲಪಡಿಸಲಾಗುವುದು. ಅರಿವಳಿಕೆ ಹಾಗೂ ಸ್ತ್ರೀರೋಗ ತಜ್ಞರು ತಲಾ ಇಬ್ಬರು ಇದ್ದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಾಧ್ಯವಾಗಲಿದೆ ಎಂದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನವಾಗಿ ಸಿದ್ಧಗೊಂಡಿರುವ ಕ್ಯಾಥ್ಲ್ಯಾಬ್ ಶೀಘ್ರವಾಗಿ ಕಾರ್ಯಾರಂಭಿಸಲಿದೆ. ಇಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಆಂಜಿಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…