ಅಡಿಕೆ ಆಮದು | ರಾಜ್ಯದ ಕೃಷಿಕರಿಗೆ ಸಮಸ್ಯೆ ಇಲ್ಲ | ಭೂತಾನ್ ಜೊತೆ ಸಂಬಂಧದ ಸಲುವಾಗಿ ಆಮದು | ಸಚಿವ ಆರಗ ಜ್ಞಾನೇಂದ್ರ ಹೇಳಿಕೆ |

October 11, 2022
10:35 PM

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement

ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group