ಅಡಿಕೆ ಆಮದು | ರಾಜ್ಯದ ಕೃಷಿಕರಿಗೆ ಸಮಸ್ಯೆ ಇಲ್ಲ | ಭೂತಾನ್ ಜೊತೆ ಸಂಬಂಧದ ಸಲುವಾಗಿ ಆಮದು | ಸಚಿವ ಆರಗ ಜ್ಞಾನೇಂದ್ರ ಹೇಳಿಕೆ |

October 11, 2022
10:35 PM

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror