ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಜ್ಯದ ಹಲವೆಡೆ ಇಂದು ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…
ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…