ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…