ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…