ಅರಂತೋಡು ಮತದಾನ ಬಹಿಷ್ಕಾರ | ದೈವದ ಮುಂದೆ ಪ್ರಾರ್ಥನೆ | ರಸ್ತೆ ಅಭಿವೃದ್ಧಿ ಆಗಲಿ, ಬ್ಯಾನರ್‌ ಹರಿದವರಿಗೆ ಶಿಕ್ಷೆಯಾಗಲಿ…. |

July 16, 2022
12:02 PM

ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು  ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.

ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.

ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್‌ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್‌ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು  ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror