ಅರಂತೋಡು ಮತದಾನ ಬಹಿಷ್ಕಾರ | ದೈವದ ಮುಂದೆ ಪ್ರಾರ್ಥನೆ | ರಸ್ತೆ ಅಭಿವೃದ್ಧಿ ಆಗಲಿ, ಬ್ಯಾನರ್‌ ಹರಿದವರಿಗೆ ಶಿಕ್ಷೆಯಾಗಲಿ…. |

July 16, 2022
12:02 PM

ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು  ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.

ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.

ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್‌ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್‌ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು  ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror