ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.
ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…