ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.
ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…