ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.
ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…