ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.
ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…