ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.
ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…