ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.
ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…