ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಕಿಡಿಗೇಡಿಗಳು ಹೊಳೆಯಲ್ಲಿ ಎಸೆದಿದ್ದರು. ಇದೀಗ ಈ ಪ್ರಕರಣ ಹೋರಾಟದ ಕಾವು ಹೆಚ್ಚಿಸಿದೆ. ಜನರೆಲ್ಲಾ ಒಂದಾಗಿ ಊರಿನ ದೈವದ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಹಾಗೂ ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ದೈವದ ಮುಂದೆ ಪ್ರಾರ್ಥನೆ ಮಾಡಲಾಯಿತು.
ಮುಖ್ಯಮಂತ್ರಿಗಳ ಆಗಮನದ ಮುನ್ನಾ ದಿನ ಬಹಿಷ್ಕಾರದ ಬ್ಯಾನರ್ ಕದ್ದು ಹೊಳೆಯಲ್ಲಿ ಎಸೆದಿದ್ದರು. ಆದರೆ ಹೋರಾಟಗಾರರು ಬ್ಯಾನರ್ ಅಳವಡಿಸಿ ಕೊಡಿ ಎಂದು ಕಿಡಿಗೇಡಿಗಳಿಗೆ ನೀಡಿದ ಸಮಯ ಮುಗಿದಿರುವುದರಿಂದ ಹಾಗೂ ಯಾವ ವ್ಯಕ್ತಿಯೂ ಈ ಬಗ್ಗೆ ತಪ್ಪು ಒಪ್ಪಿಕೊಂಡು ಬ್ಯಾನರ್ ಗಳನ್ನು ಆಳವಡಿಸಿಲ್ಲ ಆದ್ದರಿಂದ ಊರಿನ ಸರ್ವ ನಾಗರಿಕರು ಸೇರಿಕೊಂಡು ಊರಿನ ದೈವಸ್ಥಾನವಾದ ಶ್ರೀ ಉಳ್ಳಾಕುಲು ದೈವಸ್ಥಾನ ಅಡ್ತಲೆ ಇಲ್ಲಿ ಬ್ಯಾನರ್ ತೆಗೆದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಮತ್ತು ನಮ್ಮ ರಸ್ತೆ ಅಭಿವೃದ್ಧಿಗೆ ಆದಷ್ಟು ಬೇಗ ಕಾಲ ಕೂಡಿಬರಬೇಕು ಎಂದು ಪ್ರಾರ್ಥನೆ ಮಾಡಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…