ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.
ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.
ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…