Opinion

ಅರ್ಕ ಮೈಕ್ರೋಬಿಯಲ್ ಕನ್ಸೇರ್ಷಿಯ.. ಅಂದರೆ AMC ಬಳಕೆ ಹೇಗೆ..? : ಏಎಂಸಿ ಎಂದರೆ ಮಣ್ಣಿಗೆ ಬೇಕಾಗುವ ಸೂಕ್ಷ್ಮಾಣು ಜೀವಿಗಳು.

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏಎಂಸಿ(AMC) ದ್ರಾವಣವನ್ನು ನೀರಿನೊಂದಿಗೆ ಕದಡಿ ಭೂಮಿಗೆ(Land) ಹಾಕಿ ಎಂದು ಕೃಷಿ ತಜ್ಞರು(Agriculture expert) ಸಲಹೆ ನೀಡುತ್ತಾರೆ.. ಈಗ ಮಾರುಕಟ್ಟೆಯಲ್ಲಿ(Market) ಹಲವಾರು ಕಂಪನಿಗಳು(Company) ಈ ಏಎಂಸಿಯನ್ನು ಚಂದ ಚಂದದ ಕಂಟೇನರ್‌ನಲ್ಲಿ ರೈತರಿಗೆ(Farmer) ಮಾರಿ ಹಣ(Money) ಮಾಡಿಕೊಳ್ಳುತ್ತಿದೆ. ಆದರೆ ಈ ಮೈಕ್ರೋಬಿಯಲ್(Microbial) ಸೂಕ್ಷ್ಮಾಣು ಜೀವಿಗಳು(Microorganisms), ಗೊಬ್ಬರ(Manure) ಅಲ್ಲ.. ಅವು ಕಣ್ಣಿಗೆ ಕಾಣದ ಅಸಂಖ್ಯಾತ ಕೋಟ್ಯಂತರ ಜೀವಿಗಳು.

ಇದೊಂಥರ ಮೀನುಗಳು ಇದ್ದಂತೆ..!! ಮೀನುಗಳು ಕಣ್ಣಿಗೆ ಕಾಣಿಸುತ್ತವೆ. ಈ ಸೂಕ್ಷ್ಮಾಣು ಜೀವಿಗಳು ಕಣ್ಣಿಗೆ ಕಾಣಿಸದು. ಮೀನುಗಳನ್ನು ನಿಮ್ಮ ಕೃಷಿ ಜಮೀನಿಗೆ ತಂದು ಸುರಿದರೆ ಅವು ಬದುಕುತ್ತವೆಯೇ..? ಹಾಗೆಯೇ ಸೂಕ್ಷ್ಮಾಣು ಜೀವಿಗಳಿಗೂ ನಿಮ್ಮ ಕೃಷಿ ಭೂಮಿಯಲ್ಲಿ ಬಾಳಲು ಅನುಕೂಲ ವಾದ, ಜಾಗ ವಾತಾವರಣ ಆಹಾರ ಎಲ್ಲವೂ ಇರಬೇಕು.. ಈ ಸೂಕ್ಷ್ಮಾಣು ಜೀವಿಗಳು ಆಯಸ್ಸು ಕೆಲವೇ ಸೆಕೆಂಡ್ ಗಳು.. ಡಾಕ್ಟರು ಸಾಯ್ಲಿ ನೋ ಇನ್ಯಾವುದೋ ಕಂಪನಿಯ ದ್ರಾವಣ ರೂಪದ ಏಎಂಸಿ ಯೋ.. ಅಮ್ಮತವೋ ಅನ್ನಪೂರ್ಣಕ್ಕನೋ ಇನ್ಯಾವುದೋ ಘನ ರೂಪದ ಗೊಬ್ಬರವೋ ಏಎಂಸಿ‌ಯನ್ನ ಕಾರ್ಖಾನೆಯಿಂದ ಚೀಲದಲ್ಲಿ ತುಂಬಿ ಕಳಿಸಿ ರಿಟೀಲ್ ಏಜನ್ಸಿ ಯವನಿಗೆ ಬಂದು ಅಲ್ಲಿಂದ ನೀವು ತಂದು ನಿಮ್ಮ ತೋಟಕ್ಕೆ ಹಾಕುವ ತನಕವೂ ಸೆಕೆಂಡ್ ಗೆ ಹುಟ್ಟಿ ಸಾಯುವ ಸೂಕ್ಷ್ಮಾಣು ಜೀವಿಗಳು ಜೀವ ಇಟ್ಟುಕೊಂಡು ಇರಲು ಸಾಧ್ಯವೇ..?

Advertisement
ಏಎಂಸಿ ಹಾಕುವ ಕೃಷಿ ಬೆಳೆಯ ಭೂಮಿ ಸಾವಯವಯುಕ್ತವಾಗಿರಬೇಕು..
ಏಎಂಸಿ ಸೂಕ್ಷ್ಮಾಣು ಜೀವಿಗಳಿಗೆ ಸಗಣಿ ಆಹಾರವಾಗಿ ಬೇಕು. ಜೊತೆಯಲ್ಲಿ ಯಾವುದಾದರೂ ಕರಗುವ ಸಾವಯವ ಕಾಂಪೋಸ್ಟ್ ಮಾದ್ಯಮ ಬೇಕು. ಈ ಕಾಂಪೋಸ್ಟ್ ಮಾದ್ಯಮ ದಲ್ಲಿ ಈ ಸೂಕ್ಷ್ಮಾಣು ಜೀವಿಗಳು ವಾಸ ಮಾಡುತ್ತಾ ಸಗಣಿಯನ್ನು ಆಹಾರವಾಗಿ ತಿನ್ನುತ್ತಾ ತಮ್ಮ ಸಂತಾನ ವೃದ್ದಿ ಮಾಡಿಕೊಳ್ಳುತ್ತಾ ಕೃಷಿ ಭೂಮಿಯಲ್ಲಿ ಕೃಷಿ ಪೂರಕ ಚಟುವಟಿಕೆಗಳನ್ನು ಮಾಡುತ್ತವೆ.. ಏಎಂಸಿ ದ್ರಾವಣವನ್ನು ಸುಮ್ಮನೆ ನೀರಿನಲ್ಲಿ ಕರಡಿ ಅಡಿಕೆ ಮರದ ಬುಡಕ್ಕೆ ಹಾಕಿದರೆ ಏಎಂಸಿ ಕದಡಿದ ಕೆಲಸ ಆಗುತ್ತದೆ, ಏಎಂಸಿ ಮಾರಿದವನಿಗೆ, ಏಎಂಸಿ ತಯಾರಿಸಿದವನಿಗೆ ಲಾಭವಾಗುತ್ತದೆ..

ಇದರ ವಸ್ತು ವಿಚಾರ ಇಷ್ಟು.. ‌‌‌ ನಾವು ನಮ್ಮ ಗೊಬ್ಬರ ತಯಾರಿಕಾ ಕೇಂದ್ರದಲ್ಲಿ ಚಾಲ್ತಿ ಮಾರುಕಟ್ಟೆಯ ಎಲ್ಲಾ ಕಂಪನಿಗಳಿಗಿಂತ ಅತ್ಯಂತ ಕಡಿಮೆ ದರದಲ್ಲಿ ಏಎಂಸಿ ದ್ರಾವಣವನ್ನೂ ಮತ್ತು ಟ್ರೈಕೋಡರ್ಮ, ಸುಡಮನೋಸ್, ಅಜಟೋಬ್ಯಾಕ್ಟರ್, ಪಿಎಸ್ ಬಿ ಮತ್ತು ಕೆಎಸ್ ಬಿ ದ್ರಾವಣವನ್ನು ಸಗಣಿ ಗೊಬ್ಬರ + ಕೋಕೋಪಿಥ್ ನೊಂದಿಗೆ ಸಮ್ಮಿಳಿತ ಗೊಳಿಸಿ ಫ್ರೆಷ್ ಗೊಬ್ಬರ ತಯಾರಿಸಿ ಮಾರಾಟ ಮಾಡುತ್ತೇವೆ.
ನಾವು ದ್ರವ ಮತ್ತು ಘನ ರೂಪದ ಗೊಬ್ಬರವನ್ನು ತಯಾರಿಸಿ ದಾಸ್ತಾನು ಮಾಡಿಡುವ ಕ್ರಮ ಇಟ್ಟುಕೊಂಡಿಲ್ಲ. ರೈತ ಗ್ರಾಹಕ ಬೇಡಿಕೆಗನುಗುಣವಾಗಿ‌ ತಯಾರಿಸಿ ಕೊಡುತ್ತೇವೆ. ದಯವಿಟ್ಟು ರೈತೋದ್ಯಮವನ್ನ ಪ್ರೋತ್ಸಾಹಿಸಿ ಎಂದು ಕೋರುತ್ತಿದ್ದೇನೆ..

ಬರಹ – ಪ್ರಬಂಧ ಅಂಬುತೀರ್ಥ
9481801869

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…

1 hour ago

ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು

ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490

2 hours ago

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

9 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

9 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

18 hours ago