Advertisement
Exclusive - Mirror Hunt

ಅರೆಭಾಷೆಯಲ್ಲಿ ಮೊದಲ ಛಂದೋಬದ್ಧ ಯಕ್ಷಗಾನ ಪ್ರಸಂಗ ಸಿದ್ದ | ಭಾಗವತರಾದ ಭವ್ಯಶ್ರೀ ಕುಲ್ಕುಂದ ರಚನೆ

Share
ಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಾದೇಶಿಕ ಉಪಭಾಷೆಯಾದ ಅರೆಭಾಷೆಯಲ್ಲಿ ಇದೇ ಮೊದಲ ಬಾರಿಗೆ ಛಂದೋಬದ್ಧ ಯಕ್ಷಗಾನ ಪ್ರಸಂಗ ರಚನೆಗೊಂಡಿದ್ದು, ತಾಳಮದ್ದಳೆಯ ಮೊದಲ ಪ್ರಯೋಗ ಯಶಸ್ವಿಯಾಗಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವಿನಂತಿಯಂತೆ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಕುಲ್ಕುಂದ ಅವರು ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸಿದ್ದಾರೆ. ಅರೆಭಾಷೆಯಲ್ಲಿ ಯಕ್ಷಗಾನ, ತಾಳಮದ್ದಳೆ ಪ್ರಯೋಗ ಈಗಾಗಲೇ ನಡೆದಿದೆ. ಆದರೆ, ಪ್ರಸಂಗ ಸಾಹಿತ್ಯ ಕನ್ನಡದಲ್ಲಿದೆ. ಅರೆಭಾಷೆಯಲ್ಲೇ ಪ್ರಸಂಗ ಸಾಹಿತ್ಯವೂ ದೊರೆಯಬೇಕು ಎಂಬ ಅಕಾಡೆಮಿಯ ಯೋಜನೆಯಂತೆ ಭವ್ಯಶ್ರೀ ಅವರು ಕನ್ನಡದಿಂದ ಐದು ಪ್ರಸಂಗಗಳನ್ನು ಅರೆಭಾಷೆಗೆ ಅನುವಾದಿಸುತ್ತಿದ್ದಾರೆ. ಈಗಾಗಲೇ ಶರಸೇತು ಬಂಧನ ಮತ್ತು ಪಂಚವಟಿ ಪ್ರಸಂಗದ ಅನುವಾದ ಪೂರ್ಣಗೊಂಡಿದೆ. ಈ ಪೈಕಿ ಶರಸೇತು ಬಂಧನ ಪ್ರಸಂಗ ‘ಬಾಣದ ಪಾಲ’ ಹೆಸರಿನಲ್ಲಿ ತಾಳಮದ್ದಳೆ ವಿಡಿಯೊ, ಆಡಿಯೊ ರೆಕಾರ್ಡಿಂಗ್ ನಡೆದಿದೆ.
‘ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸಬೇಕು ಎಂಬ ಪ್ರಯತ್ನಕ್ಕೆ ಮುಂದಾದಾಗ ಬರೆಯುವವರು ಯಾರು ಎಂಬ ಪ್ರಶ್ನೆ ಎದುರಾಯಿತು. ಅರೆಭಾಷೆ ತಿಳಿದಿರುವವರಿಗೆ ಯಕ್ಷಗಾನ ಛಂದಸ್ಸು ತಿಳಿದಿರಲಿಲ್ಲ. ಛಂದಸ್ಸು ಅರಿತವರಿಗೆ ಭಾಷೆ ಸಮಸ್ಯೆ. ಈ ವೇಳೆ ಈಗಾಗಲೇ ಛಂದೋಬದ್ದವಾಗಿ ಕನ್ನಡ ಪದ್ಯ ರಚನೆಯ ಪ್ರಯತ್ನ ನಡೆಸುತ್ತಿರುವ  ಭಾಗವತರಾದ ಭವ್ಯಶ್ರೀ ಅವರ ಬಗ್ಗೆ ತಿಳಿದು, ಅವರನ್ನು ಸಂಪರ್ಕಿಸಿ ಅರೆಭಾಷೆಗೆ ಯಕ್ಷಗಾನ ಪ್ರಸಂಗವನ್ನು ಅನುವಾದಿಸಲು ವಿನಂತಿಸಲಾಯಿತು. ಆರಂಭದಲ್ಲಿ ಹಿಂಜರಿದರೂ, ಬಳಿಕ ಹೊಸ ಪ್ರಯೋಗಕ್ಕೆ ಕೈಜೋಡಿಸಿದ್ದಾರೆ. ಯಕ್ಷಗಾನ ಪ್ರದರ್ಶನಕ್ಕೆ ಹೊಂದಿಕೆಯಾಗುವ ಮೂರು ಪ್ರಸಂಗ ಹಾಗೂ ತಾಳಮದ್ದಳೆಗೆ ಎರಡು ಪ್ರಸಂಗ ರಚನೆಗೆ ಮನವಿ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಐದು ಪ್ರಸಂಗಗಳು ಅರೆಭಾಷೆಯಲ್ಲಿ ಲಭ್ಯವಾಗಲಿವೆ. ಇದು ಭಾಷೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದ್ದಾರೆ.
ಅರೆಭಾಷೆಯಲ್ಲಿ ಪದ್ಯ ರಚನೆ ಸಂದರ್ಭ ನನ್ನ ಮೊದಲ ಗುರುಗಳಾದ ವಿಶ್ವವಿನೋದ ಬನಾರಿ ಅವರು ಪ್ರೋತ್ಸಾಹ ನೀಡಿದ್ದಾರೆ. ಗುರುಗಳಾದ ಗಣೇಶ ಕೊಲೆಕಾಡಿ ಅವರು ಛಂದಸ್ಸಿನ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ. ಭಾಗವತರಾದ ಸುಬ್ರಾಯ ಸಂಪಾಜೆ ಭಾಷೆ ಬಗ್ಗೆ ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಸರ್ವ ಸದಸ್ಯರು, ಜಬ್ಬಾರ್ ಸಮೊ ಅವರು ಪ್ರೋತ್ಸಾಹ ನೀಡಿದ್ದಾರೆ ಎನ್ನುತ್ತಾರೆ ಭವ್ಯಶ್ರಿ ಕುಲ್ಕುಂದ.
ಭವ್ಯಶ್ರೀ ಅವರ ಕನ್ನಡದ ಪದ್ಯ ರಚನೆ ಓದಿದ್ದೆ. ಅವರಿಗೆ ಬರೆಯುವ ಸಾಮರ್ಥ್ಯವಿದ್ದು, ಅರೆಭಾಷೆಯಲ್ಲಿ ಪ್ರಸಂಗ ರಚಿಸಬಹುದು ಎಂದು ಅರೆಭಾಷೆ ಅಕಾಡೆಮಿಗೆ ಸಲಹೆ ನೀಡಿದ್ದೆ. ಭವ್ಯಶ್ರೀ ಅವರ ಪ್ರಸಂಗ ರಚನೆ ಪ್ರಯತ್ನ ಅರೆಭಾಷೆಗೆ ಕೊಡುಗೆ ಆಗುತ್ತದೆ – ಸುಬ್ರಾಯ ಸಂಪಾಜೆ ಯಕ್ಷಗಾನ ಭಾಗವತರು
ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸುವ ಬಗ್ಗೆ ಅಕಾಡೆಮಿ ತಜ್ಞರ ಸಲಹೆ ಪಡೆದು ಪ್ರಯತ್ನ ಆರಂಭಿಸಿತು. ಇದೀಗ ಎರಡು ಪ್ರಸಂಗ ರಚನೆಗೊಂಡಿದೆ. ರೆಕಾರ್ಡಿಂಗ್ ಆದ ತಾಳಮದ್ದಳೆಯನ್ನು ಸದ್ಯದಲ್ಲೇ ಅಕಾಡೆಮಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಮುಂದಕ್ಕೆ ಐದು ಪ್ರಸಂಗಗಳು ಅರೆಭಾಷೆಯಲ್ಲಿ ಲಭ್ಯವಾಗಲಿವೆ.  – ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ
ಅರೆಭಾಷೆಯಲ್ಲಿ ಛಂದೋಬದ್ಧ ಪ್ರಸಂಗ ರಚನೆ ಸುಲಭವಲ್ಲ. ಅರೆಭಾಷೆಯಲ್ಲಿ ಅರ್ಧಪದಗಳ ಬಳಕೆ ಹೆಚ್ಚು. ಇದನ್ನು ಛಂದಸ್ಸಿಗೆ ಹೊಂದಿಸುವುದು ಸವಾಲಿನ ಕೆಲಸ. ಲಾಕ್‌ಡೌನ್ ಅವಧಿಯಲ್ಲಿ ಪ್ರಸಂಗ ಅನುವಾದ ಆರಂಭಿಸಿದೆ. ಅಕಾಡೆಮಿ ನೇತೃತ್ವದಲ್ಲಿ ಹೊಸ ಪ್ರಯೋಗಕ್ಕೆ ಕೈಜೋಡಿಸಿದ ಖುಷಿ ಇದೆ. –ಭವ್ಯಶ್ರೀ ಕುಲ್ಕುಂದ , ಯಕ್ಷಗಾನ ಭಾಗವತರು
ಭವ್ಯಶ್ರೀ ಅವರು ಹಾಡಿರುವ ಯಕ್ಷಗಾನದ ಹಾಡಿನ ತುಣುಕು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago