Advertisement
Exclusive - Mirror Hunt

ಅರೆಭಾಷೆಯಲ್ಲಿ ಮೊದಲ ಛಂದೋಬದ್ಧ ಯಕ್ಷಗಾನ ಪ್ರಸಂಗ ಸಿದ್ದ | ಭಾಗವತರಾದ ಭವ್ಯಶ್ರೀ ಕುಲ್ಕುಂದ ರಚನೆ

Share
ಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಾದೇಶಿಕ ಉಪಭಾಷೆಯಾದ ಅರೆಭಾಷೆಯಲ್ಲಿ ಇದೇ ಮೊದಲ ಬಾರಿಗೆ ಛಂದೋಬದ್ಧ ಯಕ್ಷಗಾನ ಪ್ರಸಂಗ ರಚನೆಗೊಂಡಿದ್ದು, ತಾಳಮದ್ದಳೆಯ ಮೊದಲ ಪ್ರಯೋಗ ಯಶಸ್ವಿಯಾಗಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವಿನಂತಿಯಂತೆ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಕುಲ್ಕುಂದ ಅವರು ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸಿದ್ದಾರೆ. ಅರೆಭಾಷೆಯಲ್ಲಿ ಯಕ್ಷಗಾನ, ತಾಳಮದ್ದಳೆ ಪ್ರಯೋಗ ಈಗಾಗಲೇ ನಡೆದಿದೆ. ಆದರೆ, ಪ್ರಸಂಗ ಸಾಹಿತ್ಯ ಕನ್ನಡದಲ್ಲಿದೆ. ಅರೆಭಾಷೆಯಲ್ಲೇ ಪ್ರಸಂಗ ಸಾಹಿತ್ಯವೂ ದೊರೆಯಬೇಕು ಎಂಬ ಅಕಾಡೆಮಿಯ ಯೋಜನೆಯಂತೆ ಭವ್ಯಶ್ರೀ ಅವರು ಕನ್ನಡದಿಂದ ಐದು ಪ್ರಸಂಗಗಳನ್ನು ಅರೆಭಾಷೆಗೆ ಅನುವಾದಿಸುತ್ತಿದ್ದಾರೆ. ಈಗಾಗಲೇ ಶರಸೇತು ಬಂಧನ ಮತ್ತು ಪಂಚವಟಿ ಪ್ರಸಂಗದ ಅನುವಾದ ಪೂರ್ಣಗೊಂಡಿದೆ. ಈ ಪೈಕಿ ಶರಸೇತು ಬಂಧನ ಪ್ರಸಂಗ ‘ಬಾಣದ ಪಾಲ’ ಹೆಸರಿನಲ್ಲಿ ತಾಳಮದ್ದಳೆ ವಿಡಿಯೊ, ಆಡಿಯೊ ರೆಕಾರ್ಡಿಂಗ್ ನಡೆದಿದೆ.
‘ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸಬೇಕು ಎಂಬ ಪ್ರಯತ್ನಕ್ಕೆ ಮುಂದಾದಾಗ ಬರೆಯುವವರು ಯಾರು ಎಂಬ ಪ್ರಶ್ನೆ ಎದುರಾಯಿತು. ಅರೆಭಾಷೆ ತಿಳಿದಿರುವವರಿಗೆ ಯಕ್ಷಗಾನ ಛಂದಸ್ಸು ತಿಳಿದಿರಲಿಲ್ಲ. ಛಂದಸ್ಸು ಅರಿತವರಿಗೆ ಭಾಷೆ ಸಮಸ್ಯೆ. ಈ ವೇಳೆ ಈಗಾಗಲೇ ಛಂದೋಬದ್ದವಾಗಿ ಕನ್ನಡ ಪದ್ಯ ರಚನೆಯ ಪ್ರಯತ್ನ ನಡೆಸುತ್ತಿರುವ  ಭಾಗವತರಾದ ಭವ್ಯಶ್ರೀ ಅವರ ಬಗ್ಗೆ ತಿಳಿದು, ಅವರನ್ನು ಸಂಪರ್ಕಿಸಿ ಅರೆಭಾಷೆಗೆ ಯಕ್ಷಗಾನ ಪ್ರಸಂಗವನ್ನು ಅನುವಾದಿಸಲು ವಿನಂತಿಸಲಾಯಿತು. ಆರಂಭದಲ್ಲಿ ಹಿಂಜರಿದರೂ, ಬಳಿಕ ಹೊಸ ಪ್ರಯೋಗಕ್ಕೆ ಕೈಜೋಡಿಸಿದ್ದಾರೆ. ಯಕ್ಷಗಾನ ಪ್ರದರ್ಶನಕ್ಕೆ ಹೊಂದಿಕೆಯಾಗುವ ಮೂರು ಪ್ರಸಂಗ ಹಾಗೂ ತಾಳಮದ್ದಳೆಗೆ ಎರಡು ಪ್ರಸಂಗ ರಚನೆಗೆ ಮನವಿ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಐದು ಪ್ರಸಂಗಗಳು ಅರೆಭಾಷೆಯಲ್ಲಿ ಲಭ್ಯವಾಗಲಿವೆ. ಇದು ಭಾಷೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದ್ದಾರೆ.
ಅರೆಭಾಷೆಯಲ್ಲಿ ಪದ್ಯ ರಚನೆ ಸಂದರ್ಭ ನನ್ನ ಮೊದಲ ಗುರುಗಳಾದ ವಿಶ್ವವಿನೋದ ಬನಾರಿ ಅವರು ಪ್ರೋತ್ಸಾಹ ನೀಡಿದ್ದಾರೆ. ಗುರುಗಳಾದ ಗಣೇಶ ಕೊಲೆಕಾಡಿ ಅವರು ಛಂದಸ್ಸಿನ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ. ಭಾಗವತರಾದ ಸುಬ್ರಾಯ ಸಂಪಾಜೆ ಭಾಷೆ ಬಗ್ಗೆ ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಸರ್ವ ಸದಸ್ಯರು, ಜಬ್ಬಾರ್ ಸಮೊ ಅವರು ಪ್ರೋತ್ಸಾಹ ನೀಡಿದ್ದಾರೆ ಎನ್ನುತ್ತಾರೆ ಭವ್ಯಶ್ರಿ ಕುಲ್ಕುಂದ.
ಭವ್ಯಶ್ರೀ ಅವರ ಕನ್ನಡದ ಪದ್ಯ ರಚನೆ ಓದಿದ್ದೆ. ಅವರಿಗೆ ಬರೆಯುವ ಸಾಮರ್ಥ್ಯವಿದ್ದು, ಅರೆಭಾಷೆಯಲ್ಲಿ ಪ್ರಸಂಗ ರಚಿಸಬಹುದು ಎಂದು ಅರೆಭಾಷೆ ಅಕಾಡೆಮಿಗೆ ಸಲಹೆ ನೀಡಿದ್ದೆ. ಭವ್ಯಶ್ರೀ ಅವರ ಪ್ರಸಂಗ ರಚನೆ ಪ್ರಯತ್ನ ಅರೆಭಾಷೆಗೆ ಕೊಡುಗೆ ಆಗುತ್ತದೆ – ಸುಬ್ರಾಯ ಸಂಪಾಜೆ ಯಕ್ಷಗಾನ ಭಾಗವತರು
ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸುವ ಬಗ್ಗೆ ಅಕಾಡೆಮಿ ತಜ್ಞರ ಸಲಹೆ ಪಡೆದು ಪ್ರಯತ್ನ ಆರಂಭಿಸಿತು. ಇದೀಗ ಎರಡು ಪ್ರಸಂಗ ರಚನೆಗೊಂಡಿದೆ. ರೆಕಾರ್ಡಿಂಗ್ ಆದ ತಾಳಮದ್ದಳೆಯನ್ನು ಸದ್ಯದಲ್ಲೇ ಅಕಾಡೆಮಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಮುಂದಕ್ಕೆ ಐದು ಪ್ರಸಂಗಗಳು ಅರೆಭಾಷೆಯಲ್ಲಿ ಲಭ್ಯವಾಗಲಿವೆ.  – ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ
ಅರೆಭಾಷೆಯಲ್ಲಿ ಛಂದೋಬದ್ಧ ಪ್ರಸಂಗ ರಚನೆ ಸುಲಭವಲ್ಲ. ಅರೆಭಾಷೆಯಲ್ಲಿ ಅರ್ಧಪದಗಳ ಬಳಕೆ ಹೆಚ್ಚು. ಇದನ್ನು ಛಂದಸ್ಸಿಗೆ ಹೊಂದಿಸುವುದು ಸವಾಲಿನ ಕೆಲಸ. ಲಾಕ್‌ಡೌನ್ ಅವಧಿಯಲ್ಲಿ ಪ್ರಸಂಗ ಅನುವಾದ ಆರಂಭಿಸಿದೆ. ಅಕಾಡೆಮಿ ನೇತೃತ್ವದಲ್ಲಿ ಹೊಸ ಪ್ರಯೋಗಕ್ಕೆ ಕೈಜೋಡಿಸಿದ ಖುಷಿ ಇದೆ. –ಭವ್ಯಶ್ರೀ ಕುಲ್ಕುಂದ , ಯಕ್ಷಗಾನ ಭಾಗವತರು
ಭವ್ಯಶ್ರೀ ಅವರು ಹಾಡಿರುವ ಯಕ್ಷಗಾನದ ಹಾಡಿನ ತುಣುಕು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

23 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

23 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago