MIRROR FOCUS

ಅಡಿಕೆ-ರಬ್ಬರ್‌ ಧಾರಣೆ ಏರಿಕೆ | ಅಡಿಕೆ ಧಾರಣೆ ಏರಿಕೆ ನಿರೀಕ್ಷೆಯಾದರೆ-ರಬ್ಬರ್‌ ಧಾರಣೆ ಸ್ಥಿರತೆಯ ನಿರೀಕ್ಷೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ನೇಕ ವರ್ಷಗಳ ಬಳಿಕ ಅಡಿಕೆ ಹಾಗೂ ರಬ್ಬರ್‌ ಧಾರಣೆ ಏರಿಕೆ ಕಂಡಿದೆ. ಅಡಿಕೆ ಧಾರಣೆ 398-400 ರೂಪಾಯಿವರೆಗೆ ಇದ್ದರೆ ರಬ್ಬರ್‌ ಧಾರಣೆ ಇದೀಗ  145  ರೂಪಾಯಿಗೆ ಏರಿಕೆ ಕಂಡಿದೆ. ಕಳೆದ ಕೆಲವು ವರ್ಷಗಳ ಬಳಿಕ ರಬ್ಬರ್‌ ಧಾರಣೆ ಏರಿಕೆ ಕಂಡಿದ್ದು ಇನ್ನೀಗ ಧಾರಣೆ ಏರಿಕೆಯ ಜೊತೆಗೆ ಸ್ಥಿರತೆಯ ನಿರೀಕ್ಷೆಯಲ್ಲಿ  ರಬ್ಬರ್‌ ಬೆಳೆಗಾರರಿದ್ದಾರೆ. ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ ಇದೆ.
Advertisement
Advertisement

ಅಡಿಕೆ ಧಾರಣೆ ಹಂತ ಹಂತವಾಗಿ ಏರಿಕೆ ಕಂಡು ಬೆಳೆಗಾರರಿಗೆ ಉತ್ತಮ ವಾತಾವರಣ ಸೃಷ್ಟಿ ಮಾಡಿತ್ತು. ಕ್ಯಾಂಪ್ಕೋ ಸಹಿತ ಸಹಕಾರಿ ಸಂಸ್ಥೆಗಳು ರೈತರ ಬೆಂಬಲಕ್ಕೆ ನಿಂತು, ಧಾರಣೆ ಸ್ಥಿರತೆ ಹಾಗೂ ಏರಿಕೆಗೆ ಕಾರಣವಾಯಿತು. ಇಂದಿಗೂ ಸಹಕಾರಿ ಸಂಸ್ಥೆಗಳು ಧಾರಣೆ ಸ್ಥಿರತೆಯನ್ನು ಕಾಯ್ದುಕೊಂಡಿವೆ. ಇನ್ನೀಗ 400  ರೂಪಾಯಿಗಿಂತ ಹೆಚ್ಚಿನ ಧಾರಣೆ ನಿರೀಕ್ಷೆ ಮಾಡಲಾಗಿದೆ. ಈಗಾಗಲೇ ಅಡಿಕೆ ಆಮದು ಬಹುತೇಕ ಕಡಿಮೆಯಾಗಿರುವುದು ಹಾಗೂ ಬೇಡಿಕೆ ವ್ಯಕ್ತವಾಗಿರುವುದು  ಧಾರಣೆ ಏರಿಕೆಗೆ ಇರುವ ಪ್ರಮುಖ ಕಾರಣವಾಗಿದೆ. ಈ ನಡುವೆ ಭೂತಾನ್‌ ಜೊತೆಗಿನ ಒಪ್ಪಂದದ ಪ್ರಕಾರ ಭಾರತ ಹಾಗೂ ಭೂತಾನ್‌ ದೇಶಗಳು ಕೃಷಿ ವಸ್ತುಗಳ ವಿನಿಮಯ ಮಾಡುತ್ತವೆ. ಅದರ ಪ್ರಕಾರ ಭೂತಾನ್‌ ದೇಶದಿಂದ ಅಡಿಕೆ ಭಾರತದೊಳಕ್ಕೆ ಬರುವ ಸಾಧ್ಯತೆ ಇದೆ. ಆದರೆ ಭೂತಾನ್‌ ನಲ್ಲಿ  ಕಡಿಮೆ ಪ್ರಮಾಣದಲ್ಲಿ ಅಡಿಕೆ ಬೆಳೆಯುವುದರಿಂದ ಹಾಗೂ ಭಾರತದ ಅಡಿಕೆ ಮಾರುಕಟ್ಟೆಯ ಮೇಲೆ ತೀರಾ ಕಡಿಮೆ ಪ್ರಮಾಣದಲ್ಲಿ  ಅದರ ಪೂರೈಕೆಯಾಗುವುದರಿಂದ ಅಡಿಕೆ ಬೆಳೆಗಾರರಿಗೆ ಸದ್ಯ ಯಾವುದೇ ಆತಂಕವಿಲ್ಲ. ಆದರೆ ಇತರ ದೇಶಗಳ ಅಡಿಕೆ ಭೂತಾನ್‌ ಮೂಲಕ ಒಳಬಾರದಂತೆ ಅಲ್ಲಿನ ವಾಣಿಜ್ಯ ಇಲಾಖೆ ಗಮನಹರಿಸಿದೆ. ಹೀಗಾಗಿ ಅಡಿಕೆ ಧಾರಣೆ ಸದ್ಯಕ್ಕೆ ಏರಿಕೆಯ ನಿರೀಕ್ಷೆ ಇದೆ.

ರಬ್ಬರ್‌ ಧಾರಣೆ ಹಲವು ಸಮಯಗಳ ಬಳಿಕ ಹಂತ ಹಂತವಾಗಿ ಏರಿಕೆ ಕಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಧಾರಣೆ ಏರಿಕೆಯಾಗುತ್ತಿರುವುದು  ಆಶಾದಾಯಕ ಬೆಳವಣಿಗೆಯಾಗಿದೆ. ಕೊರೋನಾ ನಂತರದಲ್ಲಿ ಎಲ್ಲಾ ದೇಶಗಳಲ್ಲೂ ರಬ್ಬರ್‌ ಉತ್ಪನ್ನಗಳ ಕಂಪನಿಗಳು ಸಕ್ರಿಯವಾಗಿವೆ. ಹೀಗಾಗಿ ಈಗ ರಬ್ಬರ್‌ ಬೇಡಿಕೆ ಹೆಚ್ಚಾಗಿದೆ. ಈ ನಡುವೆ ಕೊರೋನಾ ಸಮಯದಲ್ಲಿ ಬಳಕೆ ಮಾಡುವ ರಬ್ಬರ್‌ ಗ್ಲೌಸ್‌ ಹಾಗೂ ಇತ್ಯಾದಿ ವಸ್ತುಗಳಿಗೂ ರಬ್ಬರ್‌ ಅಗತ್ಯವಾಗಿದ್ದು ಸದ್ಯ ನೈಸರ್ಗಿಕ ರಬ್ಬರ್‌ ಬಳಕೆ ಹೆಚ್ಚಾಗಿರುವುದು  ಈಗ ರಬ್ಬರ್‌ ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ. ಈ ಧಾರಣೆ ಸ್ಥಿರತೆಯ ಕಡೆಗೆ ಹೆಚ್ಚು ಗಮನ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ದೇಶದ ಆರ್ಥಿಕತೆ ಕೂಡಾ ಏರಿಕೆಗೆ ಈಗ ಕೃಷಿ ವಸ್ತುಗಳ ಕಡೆಗೂ ಹೆಚ್ಚಿನ ಗಮನಹರಿಸಲಾಗುತ್ತಿದೆ. ಈ ಎಲ್ಲಾ ಕಾರಣಗಳಿಂದ ರಬ್ಬರ್‌ ಧಾರಣೆ ಏರಿಕೆಯಾಗುತ್ತಿದೆ. ಆದರೆ ಕೆಲವು ವರ್ಷಗಳ ಹಿಂದಿನಂತಹ ಧಾರಣೆಗೆ ತಲುಪಲು ಸಾಧ್ಯವಿಲ್ಲ.

ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಈಗ ಆತಂಕ ಪಡಬೇಕಾದ ಅಗತ್ಯವಿಲ್ಲ. ಈಗ ಉತ್ತಮ ಧಾರಣೆ ಇದೆ. ಅಡಿಕೆಗೆ ಈಗಲೂ ಬೇಡಿಕೆ ಇದೆ ಎಂದು ಹೇಳುತ್ತಾರೆ ಕ್ಯಾಂಪ್ಕೋ ಅಧ್ಯಕ್ಷ ಎಸ್‌ ಆರ್‌ ಸತೀಶ್ಚಂದ್ರ.

 

Advertisement

ರಬ್ಬರ್‌ ಧಾರಣೆ ಈ ಹಿಂದೆಯೇ ಏರಿಕೆ ಕಾಣಬೇಕಿತ್ತು. ಈಗ ಧಾರಣೆ ಏರಿಕೆ ಕಂಡಿದೆ. ಕನಿಷ್ಟ 150  ರೂಪಾಯಿಗಿಂತ ಹೆಚ್ಚಿನ ಧಾರಣೆ ರಬ್ಬರ್‌ ಗೆ ಲಭ್ಯವಾಗುವಂತೆ ಕರ್ನಾಟಕದಲ್ಲೂ ರಾಜ್ಯ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಪುತ್ತೂರಿನ ರಬ್ಬರ್‌ ಬೆಳೆಗಾರ ಶ್ರೀನಿಧಿ ಹೇಳುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

4 hours ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

4 hours ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

14 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

15 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

15 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

15 hours ago