ಭೂತಾನ್‌ನಿಂದ ಅಡಿಕೆ ಆಮದು | ತಕ್ಷಣವೇ ಆಮದು ಆದೇಶ ರದ್ದತಿಗೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ

September 30, 2022
11:43 AM
ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆಯನ್ನು ಯಾವುದೇ ನಿರ್ಬಂಧ ಇಲ್ಲದೆಯೇ ಆಮದಿಗೆ ಕೇಂದ್ರ ಸರ್ಕಾರವು ಡಿಜಿಎಫ್‌ಟಿ ಅನುಮತಿ ನೀಡಿರುವುದು  ಬೆಳಕಿಗೆ ಬಂದಿದೆ. ದೇಶದ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ತಕ್ಷಣವೇ ಈ ಅನುಮತಿಯನ್ನು ರದ್ದು ಮಾಡಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ    ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಭೂತಾನ್‌ ಮೂಲಕ ಸದ್ಯ ಅಡಿಕೆ ಆಮದು ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆಗೆ  , ಅಡಿಕೆ ಬೆಳೆಗೆ ಯಾವುದೇ ಪರಿಣಾಮ ಬೀರದು. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆಯ ಮೇಲೆ, ಅಡಿಕೆ ಬೆಳೆಗಾರರ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇಲ್ಲಿ ಹಸಿ ಅಡಿಕೆ ಅಥವಾ ಚಾಲಿ ಅಡಿಕೆ ಅಥವಾ ದ್ವಿತೀಯ ದರ್ಜೆಯ ಅಡಿಕೆ ಎಂಬುದರ ಬದಲಾಗಿ ಅಡಿಕೆ ಆಮದು ಯಾವುದೇ ವಿಧದಿಂದ ಆದರೂ ಬೇರೆ ಬೇರೆ ಕಾರಣಗಳಿಂದ ದೇಶದ ಅಡಿಕೆ ಬೆಳೆಗಾರರಿಗೆ ಹಾನಿ ಇದೆ. ಹೀಗಾಗಿ ಅಡಿಕೆ ಆಮದು ಯಾವುದೇ ಕಾರಣದಿಂದ ನಡೆಯಬಾರದು. ಇದರ ಜೊತೆಗೆ ಅಡಿಕೆ ಆಮದು ಕನಿಷ್ಟ ಧಾರಣೆ 350 ರೂಪಾಯಿ ನಿಗದಿ ಮಾಡಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಅಶೋಕ್‌ ಕಿನಿಲ  ಹೇಳಿದ್ದಾರೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group