ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

March 4, 2025
3:30 PM
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ ಹವಾಮಾನದಲ್ಲಿ ರೋಗ ಉಲ್ಭಣವಾಗುತ್ತದೆ, ರೋಗ ಬರುವ ಸಾಧ್ಯತೆ ಇದೆ ಎನ್ನುವ ರೋಗ ಮಾಹಿತಿ ನೀಡುವ ಕೆಲಸ ಸರ್ಕಾರ ಇಲಾಖೆಗಳ ಮೂಲಕ‌ ಮುಂಚಿತವಾಗಿ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯಿಸಿದರು.

ಅಡಿಕೆ ಎಲೆಚುಕ್ಕಿ ರೋಗಕ್ಕೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅಧಿವೇಶನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ………ಮುಂದೆ ಓದಿ……..

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ವಿಪರೀತವಾಗಿ ಬಾಧಿಸಿದೆ. ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅಧಿವೇಶನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ರೋಗಗಳಿಗೆ ಔಷಧಿ ಹಾಗೂ ಸೂಕ್ತ ಪರಿಹಾರ ನೀಡುವ ಪ್ರಸ್ತಾವನೆಯ ಬಗ್ಗೆ ಕೇಳಿದ್ದಾರೆ. ಸರ್ಕಾರದ ಮುಂದೆ ಯಾವುದೇ ಪ್ರತ್ಯೇಕ ಪರಿಹಾರ ನೀಡುವ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಸ್ಫಷ್ಟಪಡಿಸಿದೆ.

Advertisement

ಆದರೆ, ಎಲೆಚುಕ್ಕೆ ರೋಗಕ್ಕೆ ಸರ್ಕಾರವು 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇ‌ರ್ ಗೆ  4000 ರೂಪಾಯಿ  ಗರಿಷ್ಠ ರೂ.6000 ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಲಾಗಿದೆ. ಸುಮಾರು 250 ಲಕ್ಷಗಳ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ಸಹಾಯಧನವನ್ನು ನೀಡಲಾಗಿರುತ್ತದೆ ಎಂದು ಉತ್ತರದಲ್ಲಿ ಸರ್ಕಾರ ತಿಳಿಸಿದೆ. ಅಡಿಕೆ ಎಲೆಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಾರ್ಯಾಗಾರಗಳು ಹಾಗೂ ಪ್ರಾತ್ಯಕ್ಷತೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದೂ ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ. ತಜ್ಞರು ನೀಡಿರುವ ಶಿಫಾರಸುಗಳನ್ನು ಹಾಗೂ ಔಷಧಿಗಳನ್ನು ಕೃಷಿಕರಿಗೆ ಇಲಾಖೆಗಳ ಮೂಲಕ ನೀಡಲಾಗುತ್ತಿದೆ.

Advertisement

ಎಲೆಚುಕ್ಕಿ ರೋಗದಿಂದ ಪೀಡಿತವಾಗಿರುವ 53977 ಹೆಕ್ಟೇರ್‌ ಪ್ರದೇಶಕ್ಕೆ 225 ಕೋಟಿ ರೂಪಾಯಿ ಪ್ರಸ್ತಾವನೆ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ.ಕೇಂದ್ರ ಹಾಗೂ ರಾಜ್ಯ ಅನುದಾನ 60:40  ಅನುಪಾತದಲ್ಲಿದ್ದು ಈ ಕಾರ್ಯಕ್ರಮವು 2 ವರ್ಷಗಳ ಅವಧಿಯದ್ದಾಗಿರುತ್ತದೆ ಎಂದು ಉತ್ತರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ  3700 ಲಕ್ಷ ರೂಪಾಯಿ ಅನುದಾನ  ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕ ಎಲೆಚುಕ್ಕೆ ರೋಗದ ನಿಯಂತ್ರಣ ಕುರಿತು ಸಂಶೋಧನೆ ಕೈಗೊಳ್ಳಲು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಇವರಿಗೆ 43.61 ನೀಡಲಾಗಿದ್ದು ಲಕ್ಷಗಳ ಅನುದಾನ ನೀಡಲಾಗಿತ್ತು ಸಂಶೋಧನೆಯು ಪ್ರಗತಿಯಲ್ಲಿರುತ್ತದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಉತ್ತರದ ಬಳಿಕ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ, ಉತ್ತರ ತೃಪ್ತಿದಾಯಕವಲ್ಲ, ಅಡಿಕೆ ಬೆಳೆಗಾರರಿಗೆ ಉಪಯೋಗದ ದೃಷ್ಟಿಯಿಂದ ಈ ಅಂಶಗಳು ಅನುಷ್ಟಾನವು ಸರಿಯಾಗಿ ಆಗಿಲ್ಲ ಎಂದು ಹೇಳಿದ್ದಾರೆ. ಆಗಸ್ಟ್ – ಸೆಪ್ಟೆಂಬರ್ ಅವಧಿಯಲ್ಲಿ ಗುಣಮಟ್ಟದ ಸುಣ್ಣದ ಲಭ್ಯತೆಗೆ ಆದ್ಯತೆ ನೀಡಬೇಕು ಹಾಗೂ ಡಿಸೀಸ್‌ ಫಾರ್ಕಾಸ್ಟ್‌ (ರೋಗ ಮುನ್ಸೂಚನೆ) ಅಂದರೆ ಯಾವ ಸಮಯದಲ್ಲಿ ರೋಗ ಬರಬಹುದು, ಅಡಿಕೆ ಬೆಳೆಗಾರರು ಯಾವಾಗ ಔಷಧಿ ಸಿಂಪಡಣೆಗೆ ಸಿದ್ಧರಾಗಬೇಕು ಎನ್ನುವುದರ ಮಾಹಿತಿಯನ್ನು ನೀಡುವ ಕೆಲಸ ಇಲಾಖೆಗಳು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ ಹವಾಮಾನದಲ್ಲಿ ರೋಗ ಉಲ್ಭಣವಾಗುತ್ತದೆ, ರೋಗ ಬರುವ ಸಾಧ್ಯತೆ ಇದೆ ಎನ್ನುವ ರೋಗ ಮಾಹಿತಿ ನೀಡುವ ಕೆಲಸ ಸರ್ಕಾರ ಇಲಾಖೆಗಳ ಮೂಲಕ‌ ಮುಂಚಿತವಾಗಿ ಮಾಡಬೇಕು ಎಂದು ಒತ್ತಾಯಿಸಿ ಈ ಬಗ್ಗೆ ಸುದೀರ್ಘ ಚರ್ಚೆ ಅಗತ್ಯ ಇದೆ ಎಂದು ಸದನದಲ್ಲಿ ಒತ್ತಾಯಿಸಿದರು.

Advertisement

During the session, MLC Kishore Kumar Botyadi urged the government to conduct disease forecasting in order to understand the prognosis of arecanut leaf Spot disease.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ
ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?
July 2, 2026
11:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror