ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಅಡಿಕೆ ಬೆಳೆಗೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗ ತೀವ್ರವಾಗಿ ಬಾಧಿಸಿದೆ. ಇದರ ಜೊತೆಗೆ ಈ ಬಾರಿ ಕೊಳೆರೋಗವೂ ವಿಪರೀತವಾಗಿ ಬಾಧಿಸಿದ್ದರಿಂದ ಅಡಿಕೆ ಬೆಳೆಗಾರರು ಇಳುವರಿ ಇಲ್ಲದೆ ಸಂಕಷ್ಟ ಪಡುವಂತಾಗಿದೆ. ಹೀಗಾಗಿ ಸರ್ಕಾರವು ತಕ್ಷಣವೇ ಗಮನಹರಿಸಿ ಬೆಳೆಸಾಲ ಮನ್ನಾ ಹಾಗೂ ದೀರ್ಘಾವಧಿ ಸಾಲದ ಬಡ್ಡಿಮನ್ನಾ ಹಾಗೂ ಅವಧಿ ವಿಸ್ತರಣೆ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸಿದ್ದಾರೆ.
ಸುಳ್ಯದ ಎಪಿಎಂಸಿ ಸಭಾಗಂಣದಲ್ಲಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸುಳ್ಯ ತಾಲೂಕು ಘಟಕದ ವತಿಯಿಂದ ನಡೆದ ಸಮಾಲೋಚನಾ ಸಭೆಯಲ್ಲಿ ಅಡಿಕೆ ಬೆಳೆಗಾರರು ಈ ಒತ್ತಾಯವನ್ನು ಮಾಡಿದ್ದಾರೆ. ಸುಳ್ಯ ತಾಲೂಕಿನ ಅಡಿಕೆ ಬೆಳೆಗಾರರು ಕಳೆದ ಹಲವು ಸಮಯಗಳಿಂದ ಹಳದಿ ಎಲೆರೋಗದಿಂದ ಬಳಲುತ್ತಿದ್ದಾರೆ. ಇದೀಗ ಎಲೆಚುಕ್ಕಿ ರೋಗವೂ ವ್ಯಾಪಕವಾಗಿದೆ. ಹೀಗಾಗಿ ಈಗ ಆರ್ಥಿಕ ಸಂಕಷ್ಟ ಎದುರಿಸುವ ಹಂತ ಬರುತ್ತಿದೆ. ಇದಕ್ಕಾಗಿ ಈಗ ಅನಿವಾರ್ಯವಾಗಿ ಸರ್ಕಾರವು ಸಾಲಮನ್ನಾ ಮಾಡಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಸುಳ್ಯ ತಾಲೂಕಿನಲ್ಲಿ ಎಲೆಚುಕ್ಕಿ ರೋಗದ ಸರ್ವೇ ನಡೆಸುವುದು. ಇದಕ್ಕಾಗಿ ಸಹಕಾರಿ ಯೂನಿಯನ್ ನವರ ಸಹಕಾರ ಪಡೆದು ಸಹಕಾರ ಸಂಘಗಳ ಮುಖಾಂತರ ಕಾರ್ಯಕ್ರಮ ರೂಪಿಸಿ ವರದಿಯನ್ನು ಸರಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಬೆಳೆಸಾಲ ಮನ್ನಾಕ್ಕೆ ಆಗ್ರಹಿಸುವುದು ಹಾಗೂ ದೀರ್ಘಾವಧಿ ಸಾಲದ ಬಡ್ಡಿಮನ್ನಾ ಮತ್ತು ಕಂತುಗಳನ್ನು ವಿಸ್ತರಿಸಲು ಬೇಡಿಕೆ ಸಲ್ಲಿಸಲು ನಿರ್ಧರಿಸಲಾಯಿತು.
ಇದೇ ವೇಳೆ ಅಡಿಕೆಯ ಜೊತೆಗೆ ಉಪಬೆಳೆ, ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿಕರಿಗೆ ಆಗುತ್ತಿರುವ ಸಮಸ್ಯೆ, ಕೋವಿ ಲೈಸನ್ಸ್ ರಿನೀವಲ್, ಪರ್ಯಾಯ ಕೃಷಿಯ ಬಗ್ಗೆ ಚಿಂತನೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚೆಗಳು ನಡೆದವು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸಂದರ್ಭ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಸಂಚಾಲಕ ಎಂ ಡಿ ವಿಜಯಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ, ಪ್ರಮುಖರುಗಳಾದ ನಿತ್ಯಾನಂದ ಮುಂಡೋಡಿ, ಎ ವಿ ತೀರ್ಥರಾಮ, ಪಿ ಸಿ ಜಯರಾಮ, ಡಿ ಎಸ್ ಗಿರೀಶ್, ಗಂಗಾಧರ ಪಿ ಎಸ್, ವೀರಪ್ಪ ಗೌಡ ಕಣಕಲ್, ಎನ್ ಜಿ ಲೋಕನಾಥ್ ರೈ, ಬಾಲಗೋಪಾಲ್ ಮೊಂಟಡ್ಕ ,ಸದಾನಂದ ಜಾಕೆ, ಪ್ರದೀಪ್ ಕುಮಾರ್ ಕೆ ಎಲ್, ನಾಗೇಶ್ ದೇವರಗುಂಡ, ಬಿಟ್ಟಿ ಬಿ ನೆಡುನೀಲಂ, ಕರುಣಾಕರ ಪಾರೆಪ್ಪಾಡಿ, ಸಚಿನ್ ಬಳ್ಳಡ್ಕ, ಉದಯಕುಮಾರ್ ಡಿ ಆರ್, ಸಾಯಿಶೇಖರ್ ಕರಿಕಳ, ಆದಿತ್ಯ ಕೆ ಮೊದಲಾದವರು ಸಲಹೆ ಸೂಚನೆ ನೀಡಿದರು. …… ಮುಂದೆ ಓದಿ……
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…