ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

April 18, 2026
10:06 PM
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ. ಅಸ್ಸಾಂ ರೈಫಲ್ಸ್ ಹಾಗೂ ಕಸ್ಟಮ್ಸ್ ತಂಡ ಗಡಿಯಲ್ಲಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದೆ.

ಅಸ್ಸಾಂ ರೈಫಲ್ಸ್‌ ಹಾಗೂ ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ ತಂಡವು ಮಿಜೋರಾಂದಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಪತ್ತೆ ಮಾಡಿದೆ. ಚಂಪೈ ಲ್ಲೆಯ ರುವಾಂಟ್ಲಾಂಗ್ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ,  98 ಚೀಲದಲ್ಲಿ ಸುಮಾರು 7,840 ಕೆಜಿಯ  ಅಂದಾಜು ಮೌಲ್ಯ ₹54.88 ಲಕ್ಷದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಈ ಕಾರ್ಯಾಚರಣೆ ಇಂಡೋ-ಮ್ಯಾನ್ಮಾರ್ ಗಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಸಾಗಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಸಾಬೀತುಪಡಿಸಿದೆ. ಪತ್ತೆಯಾದ ಅಡಿಕೆಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಹಾಗೂ ಕಾನೂನು ಕ್ರಮಗಳು ಮುಂದುವರಿದಿವೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಇದು ದೇಶೀಯ ಮಾರುಕಟ್ಟೆ ಬೆಲೆಗಳ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕರ್ನಾಟಕದ ಅಡಿಕೆ ರೈತರಿಗೆ ಬೆಲೆ ಅಸ್ಥಿರತೆ, ಮಾರುಕಟ್ಟೆ ಒತ್ತಡಕ್ಕೆ ಕಾರಣವಾಗುತ್ತಿದೆ.  ಇಂತಹ ಕಾರ್ಯಾಚರಣೆಗಳು ಕಳ್ಳಸಾಗಣೆ ನಿಯಂತ್ರಣಕ್ಕೆ ನೆರವಾಗುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಳೆದ ಎರಡು ವಾರಗಳಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ವಾರ ದೋಣಿಯ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಪತ್ತೆಯಾಗಿತ್ತು. ಇದೇ ಸಮಯಕ್ಕೆ ಅಡಿಕೆ ಧಾರಣೆ ಕೂಡಾ ಏರಿಳಿತ ಕಾಣುತ್ತಿದೆ.

Assam Rifles, along with the Customs Preventive Force, seized 98 bags of areca nuts weighing 7,840 kg worth ₹54.88 lakh in Champhai district of Mizoram. The operation reflects ongoing efforts to curb illegal smuggling along the Indo-Myanmar border.

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror