Advertisement
MIRROR FOCUS

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

Share

ಅಸ್ಸಾಂ ರೈಫಲ್ಸ್‌ ಹಾಗೂ ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ ತಂಡವು ಮಿಜೋರಾಂದಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಪತ್ತೆ ಮಾಡಿದೆ. ಚಂಪೈ ಲ್ಲೆಯ ರುವಾಂಟ್ಲಾಂಗ್ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ,  98 ಚೀಲದಲ್ಲಿ ಸುಮಾರು 7,840 ಕೆಜಿಯ  ಅಂದಾಜು ಮೌಲ್ಯ ₹54.88 ಲಕ್ಷದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಈ ಕಾರ್ಯಾಚರಣೆ ಇಂಡೋ-ಮ್ಯಾನ್ಮಾರ್ ಗಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಸಾಗಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಸಾಬೀತುಪಡಿಸಿದೆ. ಪತ್ತೆಯಾದ ಅಡಿಕೆಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಹಾಗೂ ಕಾನೂನು ಕ್ರಮಗಳು ಮುಂದುವರಿದಿವೆ.

Advertisement

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಇದು ದೇಶೀಯ ಮಾರುಕಟ್ಟೆ ಬೆಲೆಗಳ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕರ್ನಾಟಕದ ಅಡಿಕೆ ರೈತರಿಗೆ ಬೆಲೆ ಅಸ್ಥಿರತೆ, ಮಾರುಕಟ್ಟೆ ಒತ್ತಡಕ್ಕೆ ಕಾರಣವಾಗುತ್ತಿದೆ.  ಇಂತಹ ಕಾರ್ಯಾಚರಣೆಗಳು ಕಳ್ಳಸಾಗಣೆ ನಿಯಂತ್ರಣಕ್ಕೆ ನೆರವಾಗುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಳೆದ ಎರಡು ವಾರಗಳಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ವಾರ ದೋಣಿಯ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಪತ್ತೆಯಾಗಿತ್ತು. ಇದೇ ಸಮಯಕ್ಕೆ ಅಡಿಕೆ ಧಾರಣೆ ಕೂಡಾ ಏರಿಳಿತ ಕಾಣುತ್ತಿದೆ.

Advertisement

Assam Rifles, along with the Customs Preventive Force, seized 98 bags of areca nuts weighing 7,840 kg worth ₹54.88 lakh in Champhai district of Mizoram. The operation reflects ongoing efforts to curb illegal smuggling along the Indo-Myanmar border.

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

13 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago