Advertisement
MIRROR FOCUS

#Arecanut | ಮಳೆಗಾಲದಲ್ಲಿ ಕಾಡುವ ಅಡಿಕೆ ಸುಳಿಕೊಳೆ ರೋಗ | ಲಕ್ಷಣಗಳು ಮತ್ತು ನಿರ್ವಹಣಾ ಕ್ರಮಗಳು ಏನು..?

Share

ಕರಾವಳಿ, ಮಲೆನಾಡು ಜನತೆಯ ಮೂಲ ಕೃಷಿ #Agriculture ಅಡಿಕೆ. ಹಾಗೆ ಮಳೆನೂ ಜಾಸ್ತಿಯೇ. ಮಳೆ ಜಾಸ್ತಿಯಾಗುತ್ತಿದ್ದಂತೆ ಅಡಿಕೆಗೆ ಕೆಲ ರೋಗಗಳು ಹತ್ತಿಕೊಳ್ಳುವುದು ಸಾಮಾನ್ಯ. ಅದರಲ್ಲೂ ಮಳೆಗಾಲ ಜೋರಾಗುತ್ತಿದ್ದಂತೆ ಅಡಿಕೆಯಲ್ಲಿ ಸುಳಿಕೊಳೆ ರೋಗ ಕಾಣಿಸಿಕೊಳ್ಳಲು ಆರಂಭಗೊಳ್ಳುತ್ತದೆ. ಇದರ ಲಕ್ಷಣಗಳು ಹಾಗೂ ಇದರ ನಿರ್ವಹಣೆ ಬಗ್ಗೆ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರಾದ ಸಂತೋಷ್ ನಿಲುಗುಳಿ ಅವರು ವಿವರವಾದ ಮಾಹಿತಿ ನೀಡಿದ್ದಾರೆ.

ಸುಳಿಕೊಳೆ ಅಡಿಕೆ ಬೆಳೆಯ ಒಂದು ಮಾರಕ ರೋಗ. ಈ ರೋಗವೂ ಕೂಡ ಪೈಟಾಪ್ತೋರ ಮೀಡಿ#Phytophthora medii ಎಂಬ ಶಿಲೀಂಧ್ರದಿಂದ ಉಂಟಾಗುತ್ತದೆ. ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿರುವ ತೋಟಗಳಲ್ಲಿ ಈ ರೋಗವು ಮುಂಗಾರು (ಜೂನ್ – ಸೆಪ್ಟೆಂಬರ್) ಮತ್ತು ಚಳಿಗಾಲದ (ಅಕ್ಟೋಬರ್ – ಫೆಬ್ರವರಿ) ತಿಂಗಳುಗಳಲ್ಲಿ ಕಂಡುಬರುತ್ತದೆ.

ಲಕ್ಷಣಗಳು

1. ಭಾಗದ ಎಳೆಗರಿ ಹಳದಿ ಬಣ್ಣಕ್ಕೆ ತಿರುಗುವುದು ರೋಗದ ಪ್ರಾರಂಭಿಕ ಲಕ್ಷಣ. ನಂತರ ಗರಿಯು ಕಂದು ಬಣ್ಣಕ್ಕೆ ತಿರುಗಿ ಸಂಪೂರ್ಣ ಸಾಯುವುದು.

2. ಈ ಹಂತದಲ್ಲಿ ರೋಗ ಪೀಡಿತ ಗರಿಯನ್ನು ಕೈಯಿಂದ ಎಳೆದಾಗ ಸುಲಭವಾಗಿ ಹೊರಕ್ಕೆ ಬರುತ್ತದೆ.

3. ಕಾಲಕ್ರಮೇಣ ಸೋಂಕಿನಿಂದಾಗಿ ಮರದ ಸುಳಿ ಸಂಪೂರ್ಣವಾಗಿ ಕೊಳೆತು ಸಾಯುತ್ತದೆ. ಸುಳಿಕೊಳೆ ಪೀಡಿತ ಮರಗಳನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ ಕೊಳೆತ ಭಾಗದಿಂದ ಹೊರಹೊಮ್ಮುವ ದುರ್ವಾಸನೆಯಿಂದಲೂ ಈ ರೋಗವನ್ನು ಗುರುತಿಸಬಹುದು.

4.ರೋಗವನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿ ಗಿಡಕ್ಕೆ ಸೂಕ್ತ ಚಿಕಿತ್ಸೆ ಮಾಡುವುದರಿಂದ ಹೊಸ ಸುಳಿ ಬರುವುದಲ್ಲದೆ ಪೀಡಿತ ಮರವನ್ನು ಉಳಿಸಿಕೊಳ್ಳಬಹುದು.

5.ಈ ರೋಗ ಗಾಳಿ ಹಾಗೂ ಕೀಟಗಳ ಮೂಲಕ ಸಹ ಹರಡುತ್ತದೆ. ರೋಗಪೀಡಿತ ಮರದ ತುದಿಯನ್ನು ಉದ್ದಕ್ಕೆ ಸೀಳಿ ಅದರಲ್ಲಿರುವ ದುರ್ವಾಸನೆಯಿಂದ ಕೂಡಿದ ರಸವನ್ನು ಹೊರ ತೆಗೆಯಬೇಕು.

ನಿರ್ವಹಣಾ ಕ್ರಮಗಳು:

1.ರೋಗಪೀಡಿತ ಮರದ ಸುಳಿಯ ಕೊಳೆತ ಅಂಗಾಂಶವನ್ನು ಒಂದು ಹರಿತವಾದ ಚಾಕುವಿನಿಂದ ತೆಗೆದು ಬೋರ್ಡೋ ಮಿಶ್ರಣದ ಪೇಸ್ಟ್ ಅಥವಾ ತಾಮ್ರದ ಆಕ್ಸಿಕ್ಲೋರೈಡ್ (ಬ್ಲೈಟಾಕ್ಸ್) ಪೇಸ್ಟ್ ಲೇಪಿಸುವುದು.

2.ಶಿಲೀಂಧ್ರನಾಶಕ ಲೇಪನ ಮಾಡಿದ ಭಾಗವನ್ನು ಪ್ಲಾಸ್ಟಿಕ್ ಹಾಳೆ ಅಥವಾ ಅಡಿಕೆ ಸೋಗೆಯಿಂದ ಮುಚ್ಚುವುದರಿಂದ ಕೀಟಗಳಿಂದ ರೋಗ ಹರಡುವುದನ್ನು ತಡೆಯಬಹುದಲ್ಲದೆ ಮಳೆಯಿಂದ ಶಿಲೀಂಧ್ರನಾಶಕ ಸೋರಿ ಹೋಗುವುದನ್ನು ತಡೆಯಬಹುದು.

3.ಕ್ರಮವರಿತು ಪ್ರತಿ ವರ್ಷ ಶೇಕಡ ೧ ರ ಬೋರ್ಡೋ ದ್ರಾವಣ ಅಥವಾ ಶೇಕಡ ೦.೩ ರ ತಾಮ್ರದ ಆಕ್ಸಿಕ್ಲೋರೈಡ್ ದ್ರಾವಣದಿಂದ ಸುಳಿ ಸಂಪೂರ್ಣವಾಗಿ ನೆನೆಯುವ ಹಾಗೆ ಸಿಂಪರಣೆ ಮಾಡುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು.

4.ಪರ್ಯಾಯವಾಗಿ ಅಂತರ್‌ವ್ಯಾಪಿ ಶಿಲೀಂಧ್ರನಾಶಕ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ ಶೇಕಡ ೦.೩ ರಂತೆ ಬಳಸಿ ರೋಗ ಹತೋಟಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-

ಸಂತೋಷ್ ನಿಲುಗುಳಿ, ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರು,  ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ, 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

9 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

10 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

18 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago