Advertisement
MIRROR FOCUS

#Arecanut | ಮಳೆಗಾಲದಲ್ಲಿ ಕಾಡುವ ಅಡಿಕೆ ಸುಳಿಕೊಳೆ ರೋಗ | ಲಕ್ಷಣಗಳು ಮತ್ತು ನಿರ್ವಹಣಾ ಕ್ರಮಗಳು ಏನು..?

Share

ಕರಾವಳಿ, ಮಲೆನಾಡು ಜನತೆಯ ಮೂಲ ಕೃಷಿ #Agriculture ಅಡಿಕೆ. ಹಾಗೆ ಮಳೆನೂ ಜಾಸ್ತಿಯೇ. ಮಳೆ ಜಾಸ್ತಿಯಾಗುತ್ತಿದ್ದಂತೆ ಅಡಿಕೆಗೆ ಕೆಲ ರೋಗಗಳು ಹತ್ತಿಕೊಳ್ಳುವುದು ಸಾಮಾನ್ಯ. ಅದರಲ್ಲೂ ಮಳೆಗಾಲ ಜೋರಾಗುತ್ತಿದ್ದಂತೆ ಅಡಿಕೆಯಲ್ಲಿ ಸುಳಿಕೊಳೆ ರೋಗ ಕಾಣಿಸಿಕೊಳ್ಳಲು ಆರಂಭಗೊಳ್ಳುತ್ತದೆ. ಇದರ ಲಕ್ಷಣಗಳು ಹಾಗೂ ಇದರ ನಿರ್ವಹಣೆ ಬಗ್ಗೆ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರಾದ ಸಂತೋಷ್ ನಿಲುಗುಳಿ ಅವರು ವಿವರವಾದ ಮಾಹಿತಿ ನೀಡಿದ್ದಾರೆ.

ಸುಳಿಕೊಳೆ ಅಡಿಕೆ ಬೆಳೆಯ ಒಂದು ಮಾರಕ ರೋಗ. ಈ ರೋಗವೂ ಕೂಡ ಪೈಟಾಪ್ತೋರ ಮೀಡಿ#Phytophthora medii ಎಂಬ ಶಿಲೀಂಧ್ರದಿಂದ ಉಂಟಾಗುತ್ತದೆ. ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿರುವ ತೋಟಗಳಲ್ಲಿ ಈ ರೋಗವು ಮುಂಗಾರು (ಜೂನ್ – ಸೆಪ್ಟೆಂಬರ್) ಮತ್ತು ಚಳಿಗಾಲದ (ಅಕ್ಟೋಬರ್ – ಫೆಬ್ರವರಿ) ತಿಂಗಳುಗಳಲ್ಲಿ ಕಂಡುಬರುತ್ತದೆ.

ಲಕ್ಷಣಗಳು

1. ಭಾಗದ ಎಳೆಗರಿ ಹಳದಿ ಬಣ್ಣಕ್ಕೆ ತಿರುಗುವುದು ರೋಗದ ಪ್ರಾರಂಭಿಕ ಲಕ್ಷಣ. ನಂತರ ಗರಿಯು ಕಂದು ಬಣ್ಣಕ್ಕೆ ತಿರುಗಿ ಸಂಪೂರ್ಣ ಸಾಯುವುದು.

2. ಈ ಹಂತದಲ್ಲಿ ರೋಗ ಪೀಡಿತ ಗರಿಯನ್ನು ಕೈಯಿಂದ ಎಳೆದಾಗ ಸುಲಭವಾಗಿ ಹೊರಕ್ಕೆ ಬರುತ್ತದೆ.

3. ಕಾಲಕ್ರಮೇಣ ಸೋಂಕಿನಿಂದಾಗಿ ಮರದ ಸುಳಿ ಸಂಪೂರ್ಣವಾಗಿ ಕೊಳೆತು ಸಾಯುತ್ತದೆ. ಸುಳಿಕೊಳೆ ಪೀಡಿತ ಮರಗಳನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ ಕೊಳೆತ ಭಾಗದಿಂದ ಹೊರಹೊಮ್ಮುವ ದುರ್ವಾಸನೆಯಿಂದಲೂ ಈ ರೋಗವನ್ನು ಗುರುತಿಸಬಹುದು.

4.ರೋಗವನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿ ಗಿಡಕ್ಕೆ ಸೂಕ್ತ ಚಿಕಿತ್ಸೆ ಮಾಡುವುದರಿಂದ ಹೊಸ ಸುಳಿ ಬರುವುದಲ್ಲದೆ ಪೀಡಿತ ಮರವನ್ನು ಉಳಿಸಿಕೊಳ್ಳಬಹುದು.

5.ಈ ರೋಗ ಗಾಳಿ ಹಾಗೂ ಕೀಟಗಳ ಮೂಲಕ ಸಹ ಹರಡುತ್ತದೆ. ರೋಗಪೀಡಿತ ಮರದ ತುದಿಯನ್ನು ಉದ್ದಕ್ಕೆ ಸೀಳಿ ಅದರಲ್ಲಿರುವ ದುರ್ವಾಸನೆಯಿಂದ ಕೂಡಿದ ರಸವನ್ನು ಹೊರ ತೆಗೆಯಬೇಕು.

ನಿರ್ವಹಣಾ ಕ್ರಮಗಳು:

1.ರೋಗಪೀಡಿತ ಮರದ ಸುಳಿಯ ಕೊಳೆತ ಅಂಗಾಂಶವನ್ನು ಒಂದು ಹರಿತವಾದ ಚಾಕುವಿನಿಂದ ತೆಗೆದು ಬೋರ್ಡೋ ಮಿಶ್ರಣದ ಪೇಸ್ಟ್ ಅಥವಾ ತಾಮ್ರದ ಆಕ್ಸಿಕ್ಲೋರೈಡ್ (ಬ್ಲೈಟಾಕ್ಸ್) ಪೇಸ್ಟ್ ಲೇಪಿಸುವುದು.

2.ಶಿಲೀಂಧ್ರನಾಶಕ ಲೇಪನ ಮಾಡಿದ ಭಾಗವನ್ನು ಪ್ಲಾಸ್ಟಿಕ್ ಹಾಳೆ ಅಥವಾ ಅಡಿಕೆ ಸೋಗೆಯಿಂದ ಮುಚ್ಚುವುದರಿಂದ ಕೀಟಗಳಿಂದ ರೋಗ ಹರಡುವುದನ್ನು ತಡೆಯಬಹುದಲ್ಲದೆ ಮಳೆಯಿಂದ ಶಿಲೀಂಧ್ರನಾಶಕ ಸೋರಿ ಹೋಗುವುದನ್ನು ತಡೆಯಬಹುದು.

3.ಕ್ರಮವರಿತು ಪ್ರತಿ ವರ್ಷ ಶೇಕಡ ೧ ರ ಬೋರ್ಡೋ ದ್ರಾವಣ ಅಥವಾ ಶೇಕಡ ೦.೩ ರ ತಾಮ್ರದ ಆಕ್ಸಿಕ್ಲೋರೈಡ್ ದ್ರಾವಣದಿಂದ ಸುಳಿ ಸಂಪೂರ್ಣವಾಗಿ ನೆನೆಯುವ ಹಾಗೆ ಸಿಂಪರಣೆ ಮಾಡುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು.

4.ಪರ್ಯಾಯವಾಗಿ ಅಂತರ್‌ವ್ಯಾಪಿ ಶಿಲೀಂಧ್ರನಾಶಕ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ ಶೇಕಡ ೦.೩ ರಂತೆ ಬಳಸಿ ರೋಗ ಹತೋಟಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-

ಸಂತೋಷ್ ನಿಲುಗುಳಿ, ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರು,  ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ, 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

11 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

11 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

16 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

16 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

16 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago