Advertisement
MIRROR FOCUS

#Arecanut | ಮಳೆಗಾಲದಲ್ಲಿ ಕಾಡುವ ಅಡಿಕೆ ಸುಳಿಕೊಳೆ ರೋಗ | ಲಕ್ಷಣಗಳು ಮತ್ತು ನಿರ್ವಹಣಾ ಕ್ರಮಗಳು ಏನು..?

Share

ಕರಾವಳಿ, ಮಲೆನಾಡು ಜನತೆಯ ಮೂಲ ಕೃಷಿ #Agriculture ಅಡಿಕೆ. ಹಾಗೆ ಮಳೆನೂ ಜಾಸ್ತಿಯೇ. ಮಳೆ ಜಾಸ್ತಿಯಾಗುತ್ತಿದ್ದಂತೆ ಅಡಿಕೆಗೆ ಕೆಲ ರೋಗಗಳು ಹತ್ತಿಕೊಳ್ಳುವುದು ಸಾಮಾನ್ಯ. ಅದರಲ್ಲೂ ಮಳೆಗಾಲ ಜೋರಾಗುತ್ತಿದ್ದಂತೆ ಅಡಿಕೆಯಲ್ಲಿ ಸುಳಿಕೊಳೆ ರೋಗ ಕಾಣಿಸಿಕೊಳ್ಳಲು ಆರಂಭಗೊಳ್ಳುತ್ತದೆ. ಇದರ ಲಕ್ಷಣಗಳು ಹಾಗೂ ಇದರ ನಿರ್ವಹಣೆ ಬಗ್ಗೆ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರಾದ ಸಂತೋಷ್ ನಿಲುಗುಳಿ ಅವರು ವಿವರವಾದ ಮಾಹಿತಿ ನೀಡಿದ್ದಾರೆ.

ಸುಳಿಕೊಳೆ ಅಡಿಕೆ ಬೆಳೆಯ ಒಂದು ಮಾರಕ ರೋಗ. ಈ ರೋಗವೂ ಕೂಡ ಪೈಟಾಪ್ತೋರ ಮೀಡಿ#Phytophthora medii ಎಂಬ ಶಿಲೀಂಧ್ರದಿಂದ ಉಂಟಾಗುತ್ತದೆ. ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿರುವ ತೋಟಗಳಲ್ಲಿ ಈ ರೋಗವು ಮುಂಗಾರು (ಜೂನ್ – ಸೆಪ್ಟೆಂಬರ್) ಮತ್ತು ಚಳಿಗಾಲದ (ಅಕ್ಟೋಬರ್ – ಫೆಬ್ರವರಿ) ತಿಂಗಳುಗಳಲ್ಲಿ ಕಂಡುಬರುತ್ತದೆ.

ಲಕ್ಷಣಗಳು

1. ಭಾಗದ ಎಳೆಗರಿ ಹಳದಿ ಬಣ್ಣಕ್ಕೆ ತಿರುಗುವುದು ರೋಗದ ಪ್ರಾರಂಭಿಕ ಲಕ್ಷಣ. ನಂತರ ಗರಿಯು ಕಂದು ಬಣ್ಣಕ್ಕೆ ತಿರುಗಿ ಸಂಪೂರ್ಣ ಸಾಯುವುದು.

2. ಈ ಹಂತದಲ್ಲಿ ರೋಗ ಪೀಡಿತ ಗರಿಯನ್ನು ಕೈಯಿಂದ ಎಳೆದಾಗ ಸುಲಭವಾಗಿ ಹೊರಕ್ಕೆ ಬರುತ್ತದೆ.

3. ಕಾಲಕ್ರಮೇಣ ಸೋಂಕಿನಿಂದಾಗಿ ಮರದ ಸುಳಿ ಸಂಪೂರ್ಣವಾಗಿ ಕೊಳೆತು ಸಾಯುತ್ತದೆ. ಸುಳಿಕೊಳೆ ಪೀಡಿತ ಮರಗಳನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ ಕೊಳೆತ ಭಾಗದಿಂದ ಹೊರಹೊಮ್ಮುವ ದುರ್ವಾಸನೆಯಿಂದಲೂ ಈ ರೋಗವನ್ನು ಗುರುತಿಸಬಹುದು.

4.ರೋಗವನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿ ಗಿಡಕ್ಕೆ ಸೂಕ್ತ ಚಿಕಿತ್ಸೆ ಮಾಡುವುದರಿಂದ ಹೊಸ ಸುಳಿ ಬರುವುದಲ್ಲದೆ ಪೀಡಿತ ಮರವನ್ನು ಉಳಿಸಿಕೊಳ್ಳಬಹುದು.

5.ಈ ರೋಗ ಗಾಳಿ ಹಾಗೂ ಕೀಟಗಳ ಮೂಲಕ ಸಹ ಹರಡುತ್ತದೆ. ರೋಗಪೀಡಿತ ಮರದ ತುದಿಯನ್ನು ಉದ್ದಕ್ಕೆ ಸೀಳಿ ಅದರಲ್ಲಿರುವ ದುರ್ವಾಸನೆಯಿಂದ ಕೂಡಿದ ರಸವನ್ನು ಹೊರ ತೆಗೆಯಬೇಕು.

ನಿರ್ವಹಣಾ ಕ್ರಮಗಳು:

1.ರೋಗಪೀಡಿತ ಮರದ ಸುಳಿಯ ಕೊಳೆತ ಅಂಗಾಂಶವನ್ನು ಒಂದು ಹರಿತವಾದ ಚಾಕುವಿನಿಂದ ತೆಗೆದು ಬೋರ್ಡೋ ಮಿಶ್ರಣದ ಪೇಸ್ಟ್ ಅಥವಾ ತಾಮ್ರದ ಆಕ್ಸಿಕ್ಲೋರೈಡ್ (ಬ್ಲೈಟಾಕ್ಸ್) ಪೇಸ್ಟ್ ಲೇಪಿಸುವುದು.

2.ಶಿಲೀಂಧ್ರನಾಶಕ ಲೇಪನ ಮಾಡಿದ ಭಾಗವನ್ನು ಪ್ಲಾಸ್ಟಿಕ್ ಹಾಳೆ ಅಥವಾ ಅಡಿಕೆ ಸೋಗೆಯಿಂದ ಮುಚ್ಚುವುದರಿಂದ ಕೀಟಗಳಿಂದ ರೋಗ ಹರಡುವುದನ್ನು ತಡೆಯಬಹುದಲ್ಲದೆ ಮಳೆಯಿಂದ ಶಿಲೀಂಧ್ರನಾಶಕ ಸೋರಿ ಹೋಗುವುದನ್ನು ತಡೆಯಬಹುದು.

3.ಕ್ರಮವರಿತು ಪ್ರತಿ ವರ್ಷ ಶೇಕಡ ೧ ರ ಬೋರ್ಡೋ ದ್ರಾವಣ ಅಥವಾ ಶೇಕಡ ೦.೩ ರ ತಾಮ್ರದ ಆಕ್ಸಿಕ್ಲೋರೈಡ್ ದ್ರಾವಣದಿಂದ ಸುಳಿ ಸಂಪೂರ್ಣವಾಗಿ ನೆನೆಯುವ ಹಾಗೆ ಸಿಂಪರಣೆ ಮಾಡುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು.

4.ಪರ್ಯಾಯವಾಗಿ ಅಂತರ್‌ವ್ಯಾಪಿ ಶಿಲೀಂಧ್ರನಾಶಕ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ ಶೇಕಡ ೦.೩ ರಂತೆ ಬಳಸಿ ರೋಗ ಹತೋಟಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-

ಸಂತೋಷ್ ನಿಲುಗುಳಿ, ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರು,  ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ, 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

1 hour ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago