Advertisement
MIRROR FOCUS

#Arecanut | ಮಳೆಗಾಲದಲ್ಲಿ ಕಾಡುವ ಅಡಿಕೆ ಸುಳಿಕೊಳೆ ರೋಗ | ಲಕ್ಷಣಗಳು ಮತ್ತು ನಿರ್ವಹಣಾ ಕ್ರಮಗಳು ಏನು..?

Share

ಕರಾವಳಿ, ಮಲೆನಾಡು ಜನತೆಯ ಮೂಲ ಕೃಷಿ #Agriculture ಅಡಿಕೆ. ಹಾಗೆ ಮಳೆನೂ ಜಾಸ್ತಿಯೇ. ಮಳೆ ಜಾಸ್ತಿಯಾಗುತ್ತಿದ್ದಂತೆ ಅಡಿಕೆಗೆ ಕೆಲ ರೋಗಗಳು ಹತ್ತಿಕೊಳ್ಳುವುದು ಸಾಮಾನ್ಯ. ಅದರಲ್ಲೂ ಮಳೆಗಾಲ ಜೋರಾಗುತ್ತಿದ್ದಂತೆ ಅಡಿಕೆಯಲ್ಲಿ ಸುಳಿಕೊಳೆ ರೋಗ ಕಾಣಿಸಿಕೊಳ್ಳಲು ಆರಂಭಗೊಳ್ಳುತ್ತದೆ. ಇದರ ಲಕ್ಷಣಗಳು ಹಾಗೂ ಇದರ ನಿರ್ವಹಣೆ ಬಗ್ಗೆ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರಾದ ಸಂತೋಷ್ ನಿಲುಗುಳಿ ಅವರು ವಿವರವಾದ ಮಾಹಿತಿ ನೀಡಿದ್ದಾರೆ.

ಸುಳಿಕೊಳೆ ಅಡಿಕೆ ಬೆಳೆಯ ಒಂದು ಮಾರಕ ರೋಗ. ಈ ರೋಗವೂ ಕೂಡ ಪೈಟಾಪ್ತೋರ ಮೀಡಿ#Phytophthora medii ಎಂಬ ಶಿಲೀಂಧ್ರದಿಂದ ಉಂಟಾಗುತ್ತದೆ. ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿರುವ ತೋಟಗಳಲ್ಲಿ ಈ ರೋಗವು ಮುಂಗಾರು (ಜೂನ್ – ಸೆಪ್ಟೆಂಬರ್) ಮತ್ತು ಚಳಿಗಾಲದ (ಅಕ್ಟೋಬರ್ – ಫೆಬ್ರವರಿ) ತಿಂಗಳುಗಳಲ್ಲಿ ಕಂಡುಬರುತ್ತದೆ.

ಲಕ್ಷಣಗಳು

1. ಭಾಗದ ಎಳೆಗರಿ ಹಳದಿ ಬಣ್ಣಕ್ಕೆ ತಿರುಗುವುದು ರೋಗದ ಪ್ರಾರಂಭಿಕ ಲಕ್ಷಣ. ನಂತರ ಗರಿಯು ಕಂದು ಬಣ್ಣಕ್ಕೆ ತಿರುಗಿ ಸಂಪೂರ್ಣ ಸಾಯುವುದು.

2. ಈ ಹಂತದಲ್ಲಿ ರೋಗ ಪೀಡಿತ ಗರಿಯನ್ನು ಕೈಯಿಂದ ಎಳೆದಾಗ ಸುಲಭವಾಗಿ ಹೊರಕ್ಕೆ ಬರುತ್ತದೆ.

3. ಕಾಲಕ್ರಮೇಣ ಸೋಂಕಿನಿಂದಾಗಿ ಮರದ ಸುಳಿ ಸಂಪೂರ್ಣವಾಗಿ ಕೊಳೆತು ಸಾಯುತ್ತದೆ. ಸುಳಿಕೊಳೆ ಪೀಡಿತ ಮರಗಳನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ ಕೊಳೆತ ಭಾಗದಿಂದ ಹೊರಹೊಮ್ಮುವ ದುರ್ವಾಸನೆಯಿಂದಲೂ ಈ ರೋಗವನ್ನು ಗುರುತಿಸಬಹುದು.

4.ರೋಗವನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿ ಗಿಡಕ್ಕೆ ಸೂಕ್ತ ಚಿಕಿತ್ಸೆ ಮಾಡುವುದರಿಂದ ಹೊಸ ಸುಳಿ ಬರುವುದಲ್ಲದೆ ಪೀಡಿತ ಮರವನ್ನು ಉಳಿಸಿಕೊಳ್ಳಬಹುದು.

5.ಈ ರೋಗ ಗಾಳಿ ಹಾಗೂ ಕೀಟಗಳ ಮೂಲಕ ಸಹ ಹರಡುತ್ತದೆ. ರೋಗಪೀಡಿತ ಮರದ ತುದಿಯನ್ನು ಉದ್ದಕ್ಕೆ ಸೀಳಿ ಅದರಲ್ಲಿರುವ ದುರ್ವಾಸನೆಯಿಂದ ಕೂಡಿದ ರಸವನ್ನು ಹೊರ ತೆಗೆಯಬೇಕು.

ನಿರ್ವಹಣಾ ಕ್ರಮಗಳು:

1.ರೋಗಪೀಡಿತ ಮರದ ಸುಳಿಯ ಕೊಳೆತ ಅಂಗಾಂಶವನ್ನು ಒಂದು ಹರಿತವಾದ ಚಾಕುವಿನಿಂದ ತೆಗೆದು ಬೋರ್ಡೋ ಮಿಶ್ರಣದ ಪೇಸ್ಟ್ ಅಥವಾ ತಾಮ್ರದ ಆಕ್ಸಿಕ್ಲೋರೈಡ್ (ಬ್ಲೈಟಾಕ್ಸ್) ಪೇಸ್ಟ್ ಲೇಪಿಸುವುದು.

2.ಶಿಲೀಂಧ್ರನಾಶಕ ಲೇಪನ ಮಾಡಿದ ಭಾಗವನ್ನು ಪ್ಲಾಸ್ಟಿಕ್ ಹಾಳೆ ಅಥವಾ ಅಡಿಕೆ ಸೋಗೆಯಿಂದ ಮುಚ್ಚುವುದರಿಂದ ಕೀಟಗಳಿಂದ ರೋಗ ಹರಡುವುದನ್ನು ತಡೆಯಬಹುದಲ್ಲದೆ ಮಳೆಯಿಂದ ಶಿಲೀಂಧ್ರನಾಶಕ ಸೋರಿ ಹೋಗುವುದನ್ನು ತಡೆಯಬಹುದು.

3.ಕ್ರಮವರಿತು ಪ್ರತಿ ವರ್ಷ ಶೇಕಡ ೧ ರ ಬೋರ್ಡೋ ದ್ರಾವಣ ಅಥವಾ ಶೇಕಡ ೦.೩ ರ ತಾಮ್ರದ ಆಕ್ಸಿಕ್ಲೋರೈಡ್ ದ್ರಾವಣದಿಂದ ಸುಳಿ ಸಂಪೂರ್ಣವಾಗಿ ನೆನೆಯುವ ಹಾಗೆ ಸಿಂಪರಣೆ ಮಾಡುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು.

4.ಪರ್ಯಾಯವಾಗಿ ಅಂತರ್‌ವ್ಯಾಪಿ ಶಿಲೀಂಧ್ರನಾಶಕ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ ಶೇಕಡ ೦.೩ ರಂತೆ ಬಳಸಿ ರೋಗ ಹತೋಟಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-

ಸಂತೋಷ್ ನಿಲುಗುಳಿ, ವಿಜ್ಞಾನಿಗಳು ಹಾಗೂ ತೋಟಗಾರಿಕಾ ಸಲಹೆಗಾರರು,  ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ, 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago