ಭಾರತದ ನೇಪಾಳ ಗಡಿಯಲ್ಲಿ 1 ಕೋಟಿ ಮೌಲ್ಯದ ಅಡಿಕೆ ವಶಕ್ಕೆ

October 15, 2025
6:30 AM

ಭಾರತ-ನೇಪಾಳ ಗಡಿಗೆ ಹೊಂದಿಕೊಂಡಿರುವ ಮೇಜರ್‌ಗಂಜ್‌ನಲ್ಲಿ ಸೋಮವಾರ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ನೇಪಾಳದಿಂದ ತರಲಾದ ಸುಮಾರು 1 ಕೋಟಿ ರೂ. ಮೌಲ್ಯದ  ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮೂವರನ್ನು ಬಂಧಿಸಲಾಗಿದೆ. ಒಟ್ಟು 196 ಚೀಲಗಳು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿ ಚೀಲವು ಸುಮಾರು 60 ಕೆಜಿ ತೂಕವಿತ್ತು ವಶಪಡಿಸಿಕೊಂಡ ಅಡಿಕೆ ಸುಮಾರು ₹1 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ನೇಪಾಳದಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಭಾರತ-ನೇಪಾಳ ಮುಕ್ತವಾಗಿ ಸರಕು ಸಾಗಾಟ ಅನುಮತಿ ಇರುವುದರಿಂದ ದಾಖಲೆ ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬೇರೆ ದೇಶಗಳಿಂದ ನೇಪಾಳದ ಮೂಲಕ ಅಡಿಕೆ ಸಾಗಾಣಿಕೆಯೇ ಇದರ ಉದ್ದೇಶವಾಗಿತ್ತು. ನೇಪಾಳಕ್ಕೆ ಯಾವುದೇ ಲಾಭವಿಲ್ಲದ ಕಾರಣದಿಂದ ಈ ರೀತಿಯ ಆಮದು-ರಫ್ತು ವಿರುದ್ಧ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಕಳ್ಳಸಾಗಾಣಿಕೆಯಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror