ಭಾರತದ ನೇಪಾಳ ಗಡಿಯಲ್ಲಿ 1 ಕೋಟಿ ಮೌಲ್ಯದ ಅಡಿಕೆ ವಶಕ್ಕೆ

October 15, 2025
6:30 AM

ಭಾರತ-ನೇಪಾಳ ಗಡಿಗೆ ಹೊಂದಿಕೊಂಡಿರುವ ಮೇಜರ್‌ಗಂಜ್‌ನಲ್ಲಿ ಸೋಮವಾರ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ನೇಪಾಳದಿಂದ ತರಲಾದ ಸುಮಾರು 1 ಕೋಟಿ ರೂ. ಮೌಲ್ಯದ  ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮೂವರನ್ನು ಬಂಧಿಸಲಾಗಿದೆ. ಒಟ್ಟು 196 ಚೀಲಗಳು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿ ಚೀಲವು ಸುಮಾರು 60 ಕೆಜಿ ತೂಕವಿತ್ತು ವಶಪಡಿಸಿಕೊಂಡ ಅಡಿಕೆ ಸುಮಾರು ₹1 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ನೇಪಾಳದಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಭಾರತ-ನೇಪಾಳ ಮುಕ್ತವಾಗಿ ಸರಕು ಸಾಗಾಟ ಅನುಮತಿ ಇರುವುದರಿಂದ ದಾಖಲೆ ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬೇರೆ ದೇಶಗಳಿಂದ ನೇಪಾಳದ ಮೂಲಕ ಅಡಿಕೆ ಸಾಗಾಣಿಕೆಯೇ ಇದರ ಉದ್ದೇಶವಾಗಿತ್ತು. ನೇಪಾಳಕ್ಕೆ ಯಾವುದೇ ಲಾಭವಿಲ್ಲದ ಕಾರಣದಿಂದ ಈ ರೀತಿಯ ಆಮದು-ರಫ್ತು ವಿರುದ್ಧ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಕಳ್ಳಸಾಗಾಣಿಕೆಯಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror