ಭಾರತ-ನೇಪಾಳ ಗಡಿಗೆ ಹೊಂದಿಕೊಂಡಿರುವ ಮೇಜರ್ಗಂಜ್ನಲ್ಲಿ ಸೋಮವಾರ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ನೇಪಾಳದಿಂದ ತರಲಾದ ಸುಮಾರು 1 ಕೋಟಿ ರೂ. ಮೌಲ್ಯದ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮೂವರನ್ನು ಬಂಧಿಸಲಾಗಿದೆ. ಒಟ್ಟು 196 ಚೀಲಗಳು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿ ಚೀಲವು ಸುಮಾರು 60 ಕೆಜಿ ತೂಕವಿತ್ತು ವಶಪಡಿಸಿಕೊಂಡ ಅಡಿಕೆ ಸುಮಾರು ₹1 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ನೇಪಾಳದಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಭಾರತ-ನೇಪಾಳ ಮುಕ್ತವಾಗಿ ಸರಕು ಸಾಗಾಟ ಅನುಮತಿ ಇರುವುದರಿಂದ ದಾಖಲೆ ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬೇರೆ ದೇಶಗಳಿಂದ ನೇಪಾಳದ ಮೂಲಕ ಅಡಿಕೆ ಸಾಗಾಣಿಕೆಯೇ ಇದರ ಉದ್ದೇಶವಾಗಿತ್ತು. ನೇಪಾಳಕ್ಕೆ ಯಾವುದೇ ಲಾಭವಿಲ್ಲದ ಕಾರಣದಿಂದ ಈ ರೀತಿಯ ಆಮದು-ರಫ್ತು ವಿರುದ್ಧ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಕಳ್ಳಸಾಗಾಣಿಕೆಯಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…