ಭಾರತ-ನೇಪಾಳ ಗಡಿಗೆ ಹೊಂದಿಕೊಂಡಿರುವ ಮೇಜರ್ಗಂಜ್ನಲ್ಲಿ ಸೋಮವಾರ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ನೇಪಾಳದಿಂದ ತರಲಾದ ಸುಮಾರು 1 ಕೋಟಿ ರೂ. ಮೌಲ್ಯದ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮೂವರನ್ನು ಬಂಧಿಸಲಾಗಿದೆ. ಒಟ್ಟು 196 ಚೀಲಗಳು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿ ಚೀಲವು ಸುಮಾರು 60 ಕೆಜಿ ತೂಕವಿತ್ತು ವಶಪಡಿಸಿಕೊಂಡ ಅಡಿಕೆ ಸುಮಾರು ₹1 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ನೇಪಾಳದಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಭಾರತ-ನೇಪಾಳ ಮುಕ್ತವಾಗಿ ಸರಕು ಸಾಗಾಟ ಅನುಮತಿ ಇರುವುದರಿಂದ ದಾಖಲೆ ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬೇರೆ ದೇಶಗಳಿಂದ ನೇಪಾಳದ ಮೂಲಕ ಅಡಿಕೆ ಸಾಗಾಣಿಕೆಯೇ ಇದರ ಉದ್ದೇಶವಾಗಿತ್ತು. ನೇಪಾಳಕ್ಕೆ ಯಾವುದೇ ಲಾಭವಿಲ್ಲದ ಕಾರಣದಿಂದ ಈ ರೀತಿಯ ಆಮದು-ರಫ್ತು ವಿರುದ್ಧ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಕಳ್ಳಸಾಗಾಣಿಕೆಯಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…