MIRROR FOCUS

ಅಡಿಕೆ ಹಾನಿಕಾರಕವಲ್ಲ‌ | ಅಡಿಕೆ ಆಮದು ದರ ಏರಿಕೆ | ಅಡಿಕೆ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಚರ್ಚೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಟಾಸ್ಕ್‌ಫೋರ್ಸ್‌ ಸಭೆ ನಡೆಯಿತು. ಈ ಸಭೆಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಆರೋಗ್ಯ ವರ್ಧಕ ಉತ್ಪನ್ನವೆಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದಿಸುವ ಹಾಗೂ ಸಂಶೋಧನಾ ವರದಿ ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ವೇಳೆ ಅಡಿಕೆ ಆಮದು ದರ ಏರಿಕೆ ಬಗ್ಗೆಯೂ ಚರ್ಚೆ ನಡೆಯಿತು.

Advertisement
Advertisement

ಆಮದು ಅಡಿಕೆಗೆ ದರವನ್ನು ಕಿಲೋಗೆ 309 ಹಾಗೂ 409 ರೂ. ಕೇಂದ್ರ ಸರ್ಕಾರ ಹೆಚ್ಚಿಸಲು ಕ್ರಮ ಆಗಬೇಕಿದೆ. ಆಮದಾಗುವ ವಿದೇಶಿ ಅಡಿಕೆಯ ಗುಣಮಟ್ಟ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವರಿಕೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧ ಕೇಂದ್ರಕ್ಕೆ ತಿಳಿಸಲು ಸಂಸದರನ್ನೊಳಗೊಂಡ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಟಾಸ್ಕ್‌ ಫೋರ್ಸ್‌ ಅಧ್ಯಕ್ಷ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ ತಾಲೂಕಿನಲ್ಲಿ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬುತ್ತಿದ್ದು, ಅಧಿಕಾರಿಗಳು ಹಾಗೂ ಸಂಶೋಧಕರು, ರೈತರ ಬಳಿ ತೆರಳಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಭೆಯಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕೆಆರ್‌ಎಎಂ ಅಧ್ಯಕ್ಷ  ಮಂಜಪ್ಪ, ತೋಟಗಾರಿಕೆ ಬೆಳೆ ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಪಿ.ಚೌಡಪ್ಪ , ಮ್ಯಾಮ್ಕೋಸ್ ಉಪಾಧ್ಯಕ್ಷ ಸುಬ್ರಹ್ಮಣ್ಯ ವೈ.ಎಸ್, ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆ, ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ಹಾಜರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 hour ago

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…

1 hour ago

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

18 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

19 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

19 hours ago