Advertisement
MIRROR FOCUS

ಅಡಿಕೆ ಹಾನಿಕಾರಕವಲ್ಲ‌ | ಅಡಿಕೆ ಆಮದು ದರ ಏರಿಕೆ | ಅಡಿಕೆ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಚರ್ಚೆ|

Share

ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಟಾಸ್ಕ್‌ಫೋರ್ಸ್‌ ಸಭೆ ನಡೆಯಿತು. ಈ ಸಭೆಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಆರೋಗ್ಯ ವರ್ಧಕ ಉತ್ಪನ್ನವೆಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದಿಸುವ ಹಾಗೂ ಸಂಶೋಧನಾ ವರದಿ ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ವೇಳೆ ಅಡಿಕೆ ಆಮದು ದರ ಏರಿಕೆ ಬಗ್ಗೆಯೂ ಚರ್ಚೆ ನಡೆಯಿತು.

ಆಮದು ಅಡಿಕೆಗೆ ದರವನ್ನು ಕಿಲೋಗೆ 309 ಹಾಗೂ 409 ರೂ. ಕೇಂದ್ರ ಸರ್ಕಾರ ಹೆಚ್ಚಿಸಲು ಕ್ರಮ ಆಗಬೇಕಿದೆ. ಆಮದಾಗುವ ವಿದೇಶಿ ಅಡಿಕೆಯ ಗುಣಮಟ್ಟ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವರಿಕೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧ ಕೇಂದ್ರಕ್ಕೆ ತಿಳಿಸಲು ಸಂಸದರನ್ನೊಳಗೊಂಡ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಟಾಸ್ಕ್‌ ಫೋರ್ಸ್‌ ಅಧ್ಯಕ್ಷ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ ತಾಲೂಕಿನಲ್ಲಿ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬುತ್ತಿದ್ದು, ಅಧಿಕಾರಿಗಳು ಹಾಗೂ ಸಂಶೋಧಕರು, ರೈತರ ಬಳಿ ತೆರಳಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಭೆಯಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕೆಆರ್‌ಎಎಂ ಅಧ್ಯಕ್ಷ  ಮಂಜಪ್ಪ, ತೋಟಗಾರಿಕೆ ಬೆಳೆ ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಪಿ.ಚೌಡಪ್ಪ , ಮ್ಯಾಮ್ಕೋಸ್ ಉಪಾಧ್ಯಕ್ಷ ಸುಬ್ರಹ್ಮಣ್ಯ ವೈ.ಎಸ್, ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆ, ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

6 hours ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

15 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

15 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

24 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

1 day ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

1 day ago